ಮೈಸೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಜತೆಗೆ ಚರ್ಚೆಗೂ ಗ್ರಾಸವಾಗಿ, ಸಂಭಾಷಣೆ ನಡೆದದ್ದಾದರೂ ಏನು ಎಂಬ ಕುತುಹಲವೂ ಇತ್ತು. ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸಂಭಾಷಣೆಯ ಗುಟ್ಟು ಬಿಚ್ಚಿಟ್ಟಿದ್ದಾರೆ.
ಈ ಮೂಲಕ ಎಲ್ಲಾ ಕೂತುಹಲಕ್ಕೆ ತೆರೆ ಎಳೆದಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಸೋಮವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸುತ್ತಾ, ʻಅವರು ನನಗೆ ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ʼ ಎಂದು ಕೇಳಿದರು. ನಾನು ಮಹಿಳಾ ಮೀಸಲಾತಿ ಪರ ಇದ್ದೇವೆ ʼ ಎಂದು ಹೇಳಿದೆ ಎಂದಿದ್ದಾರೆ.
ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಬಿಜೆಪಿಗೆ ಇಚ್ಛಾಶಕ್ತಿ ಇಲ್ಲ. ಈ ವಿಷಯದಲ್ಲಿ ಪ್ರಧಾನಿ ಮೋದಿ ಡಬಲ್ ಸ್ಟ್ಯಾಂಡ್ ಹೊಂದಿದ್ದಾರೆ. ಅವರು ಅಧಿಕಾರಕ್ಕೆ ಬಂದು 12 ವರ್ಷವಾಯಿತು. ಅವರು ಮನಸ್ಸು ಮಾಡಿದ್ದರೆ 2023ರಲ್ಲಿಯೇ ಮಹಿಳಾ ಮೀಸಲಾತಿ ಜಾರಿಗೆ ತರಬಹುದಿತ್ತು. ಈಗ ಜಾರಿ ಮಾಡಲು ಅವಕಾಶವಿಲ್ಲ ಎಂದು ಮನಗಂಡೇ ರಾಜಕೀಯ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್ಗಢದ…
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…