ಮೈಸೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಜತೆಗೆ ಚರ್ಚೆಗೂ ಗ್ರಾಸವಾಗಿ, ಸಂಭಾಷಣೆ ನಡೆದದ್ದಾದರೂ ಏನು ಎಂಬ ಕುತುಹಲವೂ ಇತ್ತು. ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸಂಭಾಷಣೆಯ ಗುಟ್ಟು ಬಿಚ್ಚಿಟ್ಟಿದ್ದಾರೆ.
ಈ ಮೂಲಕ ಎಲ್ಲಾ ಕೂತುಹಲಕ್ಕೆ ತೆರೆ ಎಳೆದಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಸೋಮವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸುತ್ತಾ, ʻಅವರು ನನಗೆ ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ʼ ಎಂದು ಕೇಳಿದರು. ನಾನು ಮಹಿಳಾ ಮೀಸಲಾತಿ ಪರ ಇದ್ದೇವೆ ʼ ಎಂದು ಹೇಳಿದೆ ಎಂದಿದ್ದಾರೆ.
ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಬಿಜೆಪಿಗೆ ಇಚ್ಛಾಶಕ್ತಿ ಇಲ್ಲ. ಈ ವಿಷಯದಲ್ಲಿ ಪ್ರಧಾನಿ ಮೋದಿ ಡಬಲ್ ಸ್ಟ್ಯಾಂಡ್ ಹೊಂದಿದ್ದಾರೆ. ಅವರು ಅಧಿಕಾರಕ್ಕೆ ಬಂದು 12 ವರ್ಷವಾಯಿತು. ಅವರು ಮನಸ್ಸು ಮಾಡಿದ್ದರೆ 2023ರಲ್ಲಿಯೇ ಮಹಿಳಾ ಮೀಸಲಾತಿ ಜಾರಿಗೆ ತರಬಹುದಿತ್ತು. ಈಗ ಜಾರಿ ಮಾಡಲು ಅವಕಾಶವಿಲ್ಲ ಎಂದು ಮನಗಂಡೇ ರಾಜಕೀಯ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…