ಮೈಸೂರು: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಪ್ರತಿಕ್ರಿಯಿಸುತ್ತಾ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ , ಅಲ್ಲಿಗೆ ಭೇಟಿಯೂ ನೀಡಲಿಲ್ಲವೇಕೆ? ಎಂದು ಪ್ರಶ್ನಿಸಿದರು.
ಸುಳ್ಳು ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ
ಕುಮಾರಸ್ವಾಮಿ ಪತ್ರಿಕಾ ಗೋಷ್ಟಿಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಎಲ್ಲ ಹೇಳಿಕೆಗಳು ಸುಳ್ಳಿನಿಂದ ಕೂಡಿದ್ದು, ಅವರ ಎಲ್ಲ ಮಾತಿಗೆ ಪ್ರತಿಕ್ರಿಯೆ ನೀಡುವುದು ಅವಶ್ಯಕತೆಯಿಲ್ಲ ಎಂದರು.
ಪೊನ್ನಣ್ಣ ನವರು ನನ್ನ ಕಾನೂನು ಸಲಹೆಗಾರರಾಗಿರುವುದರಿಂದ, ಪ್ರತಿದಿನ ಅವರಿಂದ ಕಾನೂನಿನ ಚರ್ಚೆ ನಡೆಸುತ್ತೇನೆ ಎಂದರು.
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ನಿಂದ ಅನ್ವಯವಾಗುವಂತೆ ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…
ಎಸ್ಎಸ್ಎಲ್ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…
ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…
‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ…