ಮೈಸೂರು

ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ‌ ಆಗ್ರಹ

ಮೈಸೂರು: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಪ್ರತಿಕ್ರಿಯಿಸುತ್ತಾ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ , ಅಲ್ಲಿಗೆ ಭೇಟಿಯೂ ನೀಡಲಿಲ್ಲವೇಕೆ? ಎಂದು ಪ್ರಶ್ನಿಸಿದರು.

ಸುಳ್ಳು ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ

ಕುಮಾರಸ್ವಾಮಿ ಪತ್ರಿಕಾ ಗೋಷ್ಟಿಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಎಲ್ಲ ಹೇಳಿಕೆಗಳು ಸುಳ್ಳಿನಿಂದ ಕೂಡಿದ್ದು, ಅವರ ಎಲ್ಲ ಮಾತಿಗೆ ಪ್ರತಿಕ್ರಿಯೆ ನೀಡುವುದು ಅವಶ್ಯಕತೆಯಿಲ್ಲ ಎಂದರು.

ಪೊನ್ನಣ್ಣ ನವರು ನನ್ನ ಕಾನೂನು ಸಲಹೆಗಾರರಾಗಿರುವುದರಿಂದ, ಪ್ರತಿದಿನ ಅವರಿಂದ ಕಾನೂನಿನ ಚರ್ಚೆ ನಡೆಸುತ್ತೇನೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

16 mins ago

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

1 hour ago

ಓದುಗರ ಪತ್ರ: ಐಪಿಎಲ್ ಟಿಕೆಟ್‌ಗೆ ಗೋಗರೆಯುತ್ತಿರುವ ಶಾಸಕರು

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…

1 hour ago

ಓದುಗರ ಪತ್ರ: ಹಿಂದಿ ಭಾಷೆ ಬಗ್ಗೆ ತಾತ್ಸಾರ ಸಲ್ಲದು

ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…

1 hour ago

ಓದುಗರ ಪತ್ರ: ಶಾಸಕ ದರ್ಶನ್ ಮಾದರಿ ನಡೆ

ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…

1 hour ago

‘ಮೋದಿ ವಿದೇಶ ನೀತಿ ದೇಶದ ಹಿತಕ್ಕೆ ಮಾರಕ’

‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ  ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ…

1 hour ago