ಮೈಸೂರು

ಮತ್ತೊಮ್ಮೆ ಮೋದಿ ಸರ್ಕಾರ ಎಂದು ಕನ್ನಡದ ಮನಸ್ಸುಗಳು ಹೇಳಿವೆ: ಪ್ರಧಾನಿ ಮೋದಿ

ಮೈಸೂರು: ನಿಮಗೆಲ್ಲಾ ನನ್ನ ಮನಸ್ಕಾರಗಳು ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದ ಮೋದಿ, ಚೈತ್ರ ನವರಾಯ್ರತಿಯ ಸಂದರ್ಭದಲ್ಲಿ ಚಾಮುಂಡಿ, ಭುವನೇಶ್ವರಿ ಹಾಗೂ ಕಾವೇರಿ ತಾಯಿಯ ಚರಣಗಳಿಗೆ ನಮಸ್ಕರಿಸುತ್ತೇನೆ. ಈ ದೇಶದ ಅತ್ಯಂತ ಹಿರಿಯ ನಾಯಕ ಎಚ್‌.ಡಿ ದೇವೇಗೌಡರ ಆಶೀರ್ವಾದ ಸಿಕ್ಕಿರುವುದು ನಮ್ಮ ಸೌಭಾಗ್ಯವಾಗಿದೆ. ನಮಗೆ ಇಡೀ ಕರ್ನಾಟಕದ ಆಶೀರ್ವಾದ ಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಸಮಾವೇಶ ಉದ್ದೇಶಿ ಮಾತನಾಡಿದ ಪ್ರಧಾನಿ ಮೋದಿ, ಹಿರಿಯ ಮತ್ಸದಿ ಎಚ್‌ಡಿಡಿ ಅವರ ಆಶೀರ್ವಾದ ನಮಗೆ ಶ್ರೇಯವಾಗಲಿದೆ. ಪೂರ್ಣ ಕರ್ಣಾಟಕ ಹೇಳುತ್ತಿದೆ ಮತ್ತೊಮ್ಮೆ ಎನ್‌ಡಿಎ ಎಂದು. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಕಲ್ಪ ಪತ್ರ ಮೋದಿಯ ಗ್ಯಾರೆಂಟಿಯಾಗಿದೆ. ಇದರನ್ವಯ ದೇಶದಲ್ಲಿ ಮುಂದಿನ ದಿನಗಳಲ್ಲಿ ಮೂರು ಕೋಟಿ ಮನೆ ನಿರ್ಮಾಣ ಮಾಡಲಾಗುವುದು. ದೇಶಾದ್ಯಂತ ಐದು ವರ್ಷಗಳವರೆಗೆ ಉಚಿತ ಪಡಿತರ ದೊರೆಯಲಿದೆ. ೭೦ ವರ್ಷ ಮೇಲ್ಪಟ್ಟವರೊಗೆ ಆಯುಷ್ಮಾನ್‌ ಯೋಜನೆಯಡಿ ಉಚಿತ ಆರೋಗ್ಯ ತಪಾಸಣೆ, ಮನೆ ಒಡತಿಗೆ ಮೂರು ಕೋಡಟಿ ಮಹಿಳೆಯರನ್ನು ಲಕ್‌ಪತಿ ದೀದಿ ಮಾಡುತ್ತೇವೆ ಇವೆಲ್ಲವೂ ಮೋದಿ ಗ್ಯಾರೆಂಟಿಯಾಗಿದೆ ಎಂದು ಭರ್ಜರಿ ಪ್ರಚಾರ ಮಾಡಿದರು.

ಮೈಸೂರು, ಹಂಪಿ ಹಾಗೂ ಬಾದಾಮಿ ಪ್ರಸಿದ್ಧ ಪ್ರವಾಸಿ ಸ್ಥಳಗಳನ್ನು ವರ್ಲ್ಡ್‌ ಟೂರಿಸಂ ಪಟ್ಟಿಗೆ ಸೇರಿಸಲಾಗುವುದು ಎಂದು ಭರವಸೆ ನೀಡಿದರು.

ಕನ್ನಡ ದೇಶದ ಸಮೃದ್ಧಿ ಭಾಷೆವಾಗಿದೆ. ಎನ್​ಡಿಎ ಏನು ಹೇಳುತ್ತೋ ಅದನ್ನು ಮಾಡಿ ತೋರಿಸುತ್ತದೆ. ತ್ರಿವಳಿ ತಲಾಖ್, ಮಹಿಳೆಯರಿಗೆ ಮೀಸಲಾತಿ, ರಾಮಮಂದಿರ ನಿರ್ಮಾಣ. ಬಿಜೆಪಿಯ ಸಂಕಲ್ಪ ಅದು ಮೋದಿಯ ಗ್ಯಾರಂಟಿ ಆಗಿರುತ್ತದೆ. ಇವೆಲ್ಲಕ್ಕೂ ಶಕ್ತಿ ನಿಮ್ಮ ಮತದಿಂದ ಸಿಗಲಿದೆ. ನಿಮ್ಮ ಪ್ರತಿಯೊಂದು ಮತವು ಮೋದಿಗೆ ಶಕ್ತಿ ನೀಡುತ್ತದೆ. ಎನ್‌ಡಿಎ ಎಚ್‌ಡಿಡಿ ಮಾರ್ಗದರ್ಶನವಿದೆ. ಬಿಎಸ್‌ವೈ ನಾಯಕತ್ವ ಹಾಗೂ ಎಚ್‌ಡಿಕೆ ಚಾಕಚಕ್ಕತೆ ಇವೆಲ್ಲೂ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ತುಕ್ಡೆ-ತುಕ್ಡೆ ಗ್ಯಾಂಗ್‌ನ ಸಲ್ತಾನ್‌ ಆಗಿ ಓಡಾಡುತ್ತಿದೆ. ಇಲ್ಲಿ ದೇಶವನ್ನು ಒಡೆಯುವ, ದೋಚುವ ಕಳ್ಳರಿದಾರೆ. ಕಾಂಗ್ರೆಸ್‌ ದೇಶದ ವಿರುದ್ಧವೇ ಮಾತನಾಡುತ್ತದೆ. 370 ಆರ್ಟಿಕಲ್​ ವಿದಿಯ ಬಗ್ಗೆ ಕಾಂಗ್ರೆಸ್​ ಪಕ್ಷದ ಅಧಕ್ಷರು ಮಾತನಾಡಿದ್ರು. 370 ಆರ್ಟಿಕಲ್​ಗೂ ಕಾಶ್ಮೀರಿಗೂ ಏನು ಸಂಬಂಧ ಎಂದು ಹೇಳಿಕೆ ನೀಡಿದ್ರು. ಭಾರತ ಮಾತೆ ಜೈ ಹೇಳೋಕೆ ಯಾರ ಅನುಮತಿ ಪಡೆಯಬೇಕು ಎನ್ನುತ್ತಾರೆ. ಇಂತವರೊಂದಿಗೆ ನೀವು ನಿಲ್ಲುತ್ತೀರಾ ಎಂದು ಪ್ರಶ್ನಿಸಿದರು.

ಈ ಲೋಕಸಭಾ ಚುನಾವಣೆ ಮುಂದಿನ 5 ವರ್ಷ ಬಹಳ ಮಹತ್ವದ್ದಾಗಿದೆ. ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ, ಇದು ಮೋದಿ ಗ್ಯಾರಂಟಿ. ದೇವೇಗೌಡರು ಕೂಡ ಭಾಷಣದಲ್ಲಿ ಗ್ಯಾರಂಟಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ಮುಂದಿನ 5 ವರ್ಷಗಳವರೆಗೆ ಉಚಿತ ರೇಷನ್ ನೀಡುತ್ತೇವೆ. 75 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ. ಬಡವರಿಗೆ ಹೊಸ ಮನೆಗಳನ್ನು ನಿರ್ಮಿಸಿ ಕೊಡುತ್ತೇವೆ ಎಂದು ಭರವಸೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

3 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

3 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

4 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

5 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

5 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

13 hours ago