ಮೈಸೂರು

ಮೈಸೂರಿನಲ್ಲಿ ಪೊಲೀಸ್‌ ಫೈರಿಂಗ್:‌ ಆರೋಪಿ ಕಾಲಿಗೆ ಗುಂಡೇಟು

ಮೈಸೂರು: ಸ್ಥಳ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್‌ ನಡೆಸಿದ್ದಾರೆ.

ಕಳೆದ ಒಂದೂವರೆ ತಿಂಗಳ ಹಿಂದೆ ದರೋಡೆಕೋರರು ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಹಾಡ ಹಗಲೇ ಕಾರನ್ನು ಅಡ್ಡಗಟ್ಟಿ ಕೇರಳದ ಉದ್ಯಮಿಯೋರ್ವರ ಹಣ ಎಗರಿಸಿ ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಜಯಪುರ ಠಾಣೆ ಪೊಲೀಸರು, ಪ್ರಕರಣ ಸಂಬಂಧ ನಾಲ್ಕು ಜನರನ್ನು ಬಂಧಿಸಿ ಜೈಲಿಗಟ್ಟಿದ್ದರು. ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳ ಸೆರೆಗೆ ಬಲೆ ಬೀಸಿದ್ದ ಪೊಲೀಸರು, ಕೇರಳ ಪೊಲೀಸರ ಜೊತೆಗೂಡಿ ಕಾರ್ಯಾಚರಣೆ ನಡೆಸಿದ್ದರು. ಕಳ್ಳರ ಜಾಡು ಹಿಡಿದ ಪೊಲೀಸರಿಗೆ ನಿನ್ನೆ ಮಂಜಾನೆ ಕೇರಳದಲ್ಲಿ ಪ್ರಕರಣದ ಮೂವರು ಆರೋಪಿಗಳು ಸೆರೆ ಸಿಕ್ಕಿದ್ದರು. ಈ ವೇಳೆ ಆರೋಪಿಗಳನ್ನು ಸ್ಥಳ ಮಹಜರು ನಡೆಸುವ ವೇಳೆ ಅರೋಪಿಯೋರ್ವ ಮೂತ್ರ ವಿಸರ್ಜನೆ ಮಾಡುತ್ತೇನೆ ಎಂದು ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ಬಿಯರ್ ಬಾಟಲಿಯಿಂದ ಎಸ್ಐ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದನು. ಈ ವೇಳೆ ಆರೋಪಿಯು ಎಸ್ಐ ಕಪಾಳಕ್ಕೆ ಬಾರಿಸಿದ್ದಲ್ಲದೇ ಅಕ್ಕಪಕ್ಕದಲ್ಲಿದ್ದ ಸಿಬ್ಬಂದಿಗಳನ್ನು ತಳ್ಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಈ ವೇಳೆ ಎಚ್ಚೆತ್ತ ಇನ್ಸ್‌ಪೆಕ್ಟರ್‌ ಗಾಳಿಯಲ್ಲಿ ಗುಂಡು ಹಾರಿಸಿ ಯಾವುದೇ ಕಾರಣಕ್ಕೂ ಓಡಬೇಡಿ ಎಂದು ಎಚ್ಚರಿಕೆ ನೀಡಿದ್ದರು. ಆದರೂ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಹಲ್ಲೆಗೊಳಗಾದ ಪೊಲೀಸರು ಹಾಗೂ ಆರೋಪಿಯನ್ನು ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

14 mins ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

2 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

11 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

11 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

11 hours ago