ಮೈಸೂರು

ಎಂಡಿಎ ಆಸ್ತಿ ರಕ್ಷಣೆಗೆ ಪೊಲೀಸ್‌ ಪಡೆ ರಚನೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ರಕ್ಷಣೆಗೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆ ರಚನೆಯಾಗಲಿದೆ.

ನಕಲಿ ದಾಖಲೆಗಳನ್ನು ಸೃಷ್ಟಿಸಿ ಎಂಡಿಎ ಆಸ್ತಿ ಒತ್ತುವರಿ ಮಾಡಿರುವ ಹಾಗೂ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಭದ್ರತೆ ಒದಗಿಸುವುದರ ಜತೆಗೆ ಪ್ರಾಧಿಕಾರದ ಆಸ್ತಿ ಸಂರಕ್ಷಣೆಯನ್ನು ಈ ಪಡೆ ಮಾಡಲಿದೆ.

ಪ್ರಾಧಿಕಾರದ ಆಸ್ತಿ ರಕ್ಷಣೆಗೆ ಪ್ರತ್ಯೇಕ ಭದ್ರತಾ ಪಡೆ ಮಾಡಬೇಕೆಂಬ ಯೋಜನೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಈಗ ಪ್ರಾಧಿಕಾರದ ಆಯುಕ್ತರಾಗಿ ನೇಮಕಗೊಂಡಿರುವ ಕೆ.ಆರ್.ರಕ್ಷಿತ್ ಅವರು ಈ ಪಡೆ ರಚನೆಯ ಯೋಜನೆಗೆ ಮರು ಜೀವ ನೀಡಿದ್ದಾರೆ.

ಇದನ್ನು ಓದಿ: ರಾಜ್ಯದ ಅತಿದೊಡ್ಡ ಸೈಬರ್‌ ವಂಚನೆ ; ಮಹಿಳಾ ಟಿಕ್ಕಿಯ 31ಕೋಟಿ ದೋಖಾ..

ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಆಸ್ತಿಗೆ ಅತಿಕ್ರಮ ಪ್ರವೇಶ ಹಾಗೂ ಒತ್ತುವರಿ ಮಾಡಿಕೊಂಡು ಅನುಭೋಗದಲ್ಲಿರುವವರನ್ನು ತೆರವುಗೊಳಿಸಲು ಪೊಲೀಸ್ ಭದ್ರತೆ ಅಗತ್ಯವಿರುತ್ತದೆ. ಆದರೆ, ಸ್ಥಳೀಯ ಪೊಲೀಸರನ್ನು ಭದ್ರತೆಗೆ ಕೋರಿದಾಗ ತಮಗೆ ಬೇರೆ ಭದ್ರತಾ ಕರ್ತವ್ಯದ ಒತ್ತಡವಿದೆ ಎನ್ನುತ್ತಾರೆ. ಪ್ರಾಧಿಕಾರದ ಅಧಿಕಾರಿಗಳು ಕೋರಿದ ದಿನದಂದು ಭದ್ರತೆ ಒದಗಿಸಲು ಹಿಂದೇಟು ಹಾಕುತ್ತಾರೆ. ಅದರಿಂದಾಗಿ ಸರಿಯಾದ ಸಮಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಒತ್ತುವರಿ ತೆರವು ಕಾರ್ಯಾಚರಣೆಗೆ ತಡೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್ ಅವರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರೊಂದಿಗೆ ಚರ್ಚೆ ನಡೆಸಿ, ಒತ್ತುವರಿ ತೆರವು ಕಾರ್ಯಾಚರಣೆಯ ಭದ್ರತೆಗೆ ಪ್ರತ್ಯೇಕ ಪೊಲೀಸ್ ಭದ್ರತೆ ಪಡೆ ರಚಿಸುವ ಸಂಬಂಧ ಮನವಿ ಸಲ್ಲಿಸಿದ್ದಾರೆ.

ಒತ್ತುವರಿ ತೆರವು ಕಾರ್ಯಾಚರಣೆಗೆ ಭದ್ರತೆ ಒದಗಿಸಲೆಂದೇ ಪ್ರತ್ಯೇಕವಾದ ಪೊಲೀಸ್ ಭದ್ರತಾ ಪಡೆ ಹೊಂದುವುದು ಅತ್ಯಗತ್ಯವಾಗಿರುವುದರಿಂದ ಈ ಕುರಿತು ಸವಿಸ್ತಾರವಾದ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ,’’ ಎನ್ನುತ್ತಾರೆ ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್.

ಪೊಲೀಸ್ ಪಡೆ : ಈ ಪಡೆಯಲ್ಲಿ ಒಬ್ಬರು ಸಹಾಯಕ ಪೊಲೀಸ್ ಆಯುಕ್ತ, ಇಬ್ಬರು ಪೊಲೀಸ್ ಇನ್ಸ್‌ ಪೆಕ್ಟರ್‌ಗಳು, ಮೂವರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ನಾಲ್ವರು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಒಳಗೊಂಡಂತೆ 25 ಮಂದಿ ಪೊಲೀಸ್ ಸಿಬ್ಬಂದಿ ಇರು

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

3 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

3 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

3 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

3 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

4 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

4 hours ago