ಮೈಸೂರು

ವಿವೇಕಾನಂದ ವೃತ್ತದಲ್ಲಿ ಪೊಲೀಸರಿಂದ ಸ್ಥಳ ಪರಿಶೀಲನೆ ; ಹಲವು ಕ್ರಮ

ಮೈಸೂರು : ನಗರದ ವಿವೇಕಾನಂದ ವೃತ್ತದಲ್ಲಿ ಅಪಘಾತ ನಡೆದು ಓರ್ವ ವ್ಯಕ್ತಿ ಸಾವಿಗೀಡಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರಪಾಲಿಕೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಸ್ಥಳ ಪರಿಶೀಲನೆ ನಡೆಸಿ ಕೆಲ ಕ್ರಮಗಳನ್ನು ತೆಗೆದುಕೊಂಡಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ರಸ್ತೆಯ ಇಕ್ಕೆಲಗಳಲ್ಲಿ ತರಕಾರಿ ಹಾಗೂ ಇನ್ನಿತರ ಪದಾರ್ಥಗಳನ್ನು ಮಾರಾಟ ಮಾಡುವ ಯಾವುದೇ ತಳ್ಳು ಗಾಡಿಗಳು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಕೃಷ್ಣರಾಜ ಸಂಚಾರ ಠಾಣಾ ಪೊಲೀಸರಿಗೆ ಸೂಚನೆ ನೀಡಿದರು.

ಇದೇ ವೇಳೆ ನಗರ ಸಾರಿಗೆ ಬಸ್‌ಗಳು ಎಲ್ಲೆಂದರಲ್ಲಿ ನಿಲ್ಲದಂತೆ ನೋಡಿಕೊಳ್ಳಬೇಕು. ಎಲ್ಲೆಂದರಲ್ಲಿ ನಿಲ್ಲುವ ಬಸ್‌ಗಳ ಚಾಲಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ ಅವರು, ವೃತ್ತದಲ್ಲಿ ಬ್ಯಾರಿಕೇಡ್ ಹಾಕುವ ಮೂಲಕ ಬ್ಯಾರಿಕೇಡ್ ಒಳಗೆ ಮಾತ್ರ ಪ್ರಯಾಣಿಕರನ್ನು ಇಳಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ನಗರಪಾಲಿಕೆ ಕ್ರಮ: ಇದೇ ವೇಳೆ ನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಅವರು ತಮ್ಮ ಸಿಬ್ಬಂದಿಗಳೊಡನೆ ಶುಕ್ರವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ತಳ್ಳು ಗಾಡಿಗಳ ಮಾಲೀಕರಿಗೆ ಎಚ್ಚರಿಕೆ ನೀಡಿ ಬೇರೆಡೆಗೆ ಕಳುಹಿಸಿದರು.

ಮಾರುಕಟ್ಟೆ ಸ್ವಚ್ಛ: ಇದೇ ವೇಳೆ ವಿವೇಕಾನಂದ ವೃತ್ತದಲ್ಲಿ ಹೂವು, ಹಣ್ಣು, ತರಕಾರಿ ಮಾರಾಟ ಮಾಡುವವರಿಗೆಂದೇ ನಿರ್ಮಿಸಲಾಗಿರುವ ಮಾರುಕಟ್ಟೆಯನ್ನು ಸ್ವಚ್ಛಗೊಳಿಸಿ ನಂತರ ಅವುಗಳನ್ನು ವ್ಯಾಪಾರಿಗಳಿಗೆ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂಬುದನ್ನು ಸ್ಥಳೀಯರಿಗೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

2 hours ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

4 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

9 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

9 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

9 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

10 hours ago