ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಒಂದೇ ವಾರದಲ್ಲಿ ಮೂರನೇ ಬೆದರಿಕೆ ಆಗಿದೆ. ಈ ಎರಡೂ ಕೃತ್ಯಗಳ ಹಿಂದೆ ಒಬ್ಬನೇ ವ್ಯಕ್ತಿ ಇರುವುದು ತಿಳಿದುಬಂದಿದೆ.
ಆರು ತಿಂಗಳ ಹಿಂದೆ ನಗರದ ಜಿಲ್ಲಾ ಪಂಚಾಯಿತಿ ಬಳಿ ಇರುವ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಪರಿಶೀಲನೆ ನಡೆಸಿದ ನ್ಯಾಯಾಧೀಶರು ಈ ವಿಚಾರವನ್ನು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದರು. ಬಳಿಕ ಇದೊಂದು ಹುಸಿ ಬೆದರಿಕೆ ಕರೆ ಎಂಬುದು ದೃಢಪಟ್ಟಿತ್ತು.
ಆರು ತಿಂಗಳ ಅವಧಿಯಲ್ಲಿ ಎರಡುಬಾರಿ ಹುಸಿ ಬಾಂಬ್ ಬೆದರಿಕೆ ಬಂದಿದೆ. ಆದರೆ, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಕಾರಣ ಆರೋಪಿಗಳು ನಕಲಿ ಐಡಿ ಬಳಸಿ ಇ-ಮೇಲ್ ಮೂಲಕ ಬೆದರಿಕೆ ಒಡ್ಡುತ್ತಿದ್ದಾರೆ.
ಆರೋಪಿಗಳು ತಮಿಳುನಾಡು, ಆಂದ್ರಪ್ರದೇಶ, ಉತ್ತರ ಪ್ರದೇಶ ಹೀಗೆ ವಿವಿಧ ಸ್ಥಳಗಳ ವಿಳಾಸವನ್ನು ಐಪಿ ವಿಳಾಸದಲ್ಲಿ ತೋರಿಸಿರುತ್ತಾರೆ. ಆರೋಪಿಗಳ ವಿಳಾಸ ಹುಡಿಕೊಂಡು ಹೋಗುವ ಪೊಲೀಸರಿಗೆ ವಿಳಾಸ ನಕಲಿ ಎಂಬುದು ಗೊತ್ತಾಗುತ್ತದೆ. ಇನ್ನು ಅವರ ಇ-ಮೇಲ್ನಲ್ಲಿ ಯಾವುದೇ ದೂರವಾಣಿ ಸಂಖ್ಯೆ ಇರುವುದಿಲ್ಲ. ಅಥವ ನಕಲಿ ಮೊಬೈಲ್ ಸಂಖ್ಯೆ ದಾಖಲಾಗಿರುತ್ತದೆ. ಹೀಗಾಗಿ ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಆದರೂ ನಗರದ ಸೈಬರ್ ವಿಭಾಗ ಅಪರಾಧಿಗಳ ಪತ್ತೆಗೆ ನಿರಂತರ ಪ್ರಯತ್ನ ಹಾಕುತ್ತಿದೆ. ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ ಎಂದು ವಿಶ್ವಾಸದಿಂದಲೇ ಹೇಳುತ್ತಾರೆ.
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…