ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಒಂದೇ ವಾರದಲ್ಲಿ ಮೂರನೇ ಬೆದರಿಕೆ ಆಗಿದೆ. ಈ ಎರಡೂ ಕೃತ್ಯಗಳ ಹಿಂದೆ ಒಬ್ಬನೇ ವ್ಯಕ್ತಿ ಇರುವುದು ತಿಳಿದುಬಂದಿದೆ.
ಆರು ತಿಂಗಳ ಹಿಂದೆ ನಗರದ ಜಿಲ್ಲಾ ಪಂಚಾಯಿತಿ ಬಳಿ ಇರುವ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಪರಿಶೀಲನೆ ನಡೆಸಿದ ನ್ಯಾಯಾಧೀಶರು ಈ ವಿಚಾರವನ್ನು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದರು. ಬಳಿಕ ಇದೊಂದು ಹುಸಿ ಬೆದರಿಕೆ ಕರೆ ಎಂಬುದು ದೃಢಪಟ್ಟಿತ್ತು.
ಆರು ತಿಂಗಳ ಅವಧಿಯಲ್ಲಿ ಎರಡುಬಾರಿ ಹುಸಿ ಬಾಂಬ್ ಬೆದರಿಕೆ ಬಂದಿದೆ. ಆದರೆ, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಕಾರಣ ಆರೋಪಿಗಳು ನಕಲಿ ಐಡಿ ಬಳಸಿ ಇ-ಮೇಲ್ ಮೂಲಕ ಬೆದರಿಕೆ ಒಡ್ಡುತ್ತಿದ್ದಾರೆ.
ಆರೋಪಿಗಳು ತಮಿಳುನಾಡು, ಆಂದ್ರಪ್ರದೇಶ, ಉತ್ತರ ಪ್ರದೇಶ ಹೀಗೆ ವಿವಿಧ ಸ್ಥಳಗಳ ವಿಳಾಸವನ್ನು ಐಪಿ ವಿಳಾಸದಲ್ಲಿ ತೋರಿಸಿರುತ್ತಾರೆ. ಆರೋಪಿಗಳ ವಿಳಾಸ ಹುಡಿಕೊಂಡು ಹೋಗುವ ಪೊಲೀಸರಿಗೆ ವಿಳಾಸ ನಕಲಿ ಎಂಬುದು ಗೊತ್ತಾಗುತ್ತದೆ. ಇನ್ನು ಅವರ ಇ-ಮೇಲ್ನಲ್ಲಿ ಯಾವುದೇ ದೂರವಾಣಿ ಸಂಖ್ಯೆ ಇರುವುದಿಲ್ಲ. ಅಥವ ನಕಲಿ ಮೊಬೈಲ್ ಸಂಖ್ಯೆ ದಾಖಲಾಗಿರುತ್ತದೆ. ಹೀಗಾಗಿ ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಆದರೂ ನಗರದ ಸೈಬರ್ ವಿಭಾಗ ಅಪರಾಧಿಗಳ ಪತ್ತೆಗೆ ನಿರಂತರ ಪ್ರಯತ್ನ ಹಾಕುತ್ತಿದೆ. ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ ಎಂದು ವಿಶ್ವಾಸದಿಂದಲೇ ಹೇಳುತ್ತಾರೆ.
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…