ಮೈಸೂರು

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಒಂದೇ ವಾರದಲ್ಲಿ ಮೂರನೇ ಬೆದರಿಕೆ ಆಗಿದೆ. ಈ ಎರಡೂ ಕೃತ್ಯಗಳ ಹಿಂದೆ ಒಬ್ಬನೇ ವ್ಯಕ್ತಿ ಇರುವುದು ತಿಳಿದುಬಂದಿದೆ.

ಆರು ತಿಂಗಳ ಹಿಂದೆ ನಗರದ ಜಿಲ್ಲಾ ಪಂಚಾಯಿತಿ ಬಳಿ ಇರುವ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಪರಿಶೀಲನೆ ನಡೆಸಿದ ನ್ಯಾಯಾಧೀಶರು ಈ ವಿಚಾರವನ್ನು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದರು. ಬಳಿಕ ಇದೊಂದು ಹುಸಿ ಬೆದರಿಕೆ ಕರೆ ಎಂಬುದು ದೃಢಪಟ್ಟಿತ್ತು.

ಆರು ತಿಂಗಳ ಅವಧಿಯಲ್ಲಿ ಎರಡುಬಾರಿ ಹುಸಿ ಬಾಂಬ್ ಬೆದರಿಕೆ ಬಂದಿದೆ. ಆದರೆ, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಕಾರಣ ಆರೋಪಿಗಳು ನಕಲಿ ಐಡಿ ಬಳಸಿ ಇ-ಮೇಲ್ ಮೂಲಕ ಬೆದರಿಕೆ ಒಡ್ಡುತ್ತಿದ್ದಾರೆ.

ಆರೋಪಿಗಳು ತಮಿಳುನಾಡು, ಆಂದ್ರಪ್ರದೇಶ, ಉತ್ತರ ಪ್ರದೇಶ ಹೀಗೆ ವಿವಿಧ ಸ್ಥಳಗಳ ವಿಳಾಸವನ್ನು ಐಪಿ ವಿಳಾಸದಲ್ಲಿ ತೋರಿಸಿರುತ್ತಾರೆ. ಆರೋಪಿಗಳ ವಿಳಾಸ ಹುಡಿಕೊಂಡು ಹೋಗುವ ಪೊಲೀಸರಿಗೆ ವಿಳಾಸ ನಕಲಿ ಎಂಬುದು ಗೊತ್ತಾಗುತ್ತದೆ. ಇನ್ನು ಅವರ ಇ-ಮೇಲ್‌ನಲ್ಲಿ ಯಾವುದೇ ದೂರವಾಣಿ ಸಂಖ್ಯೆ ಇರುವುದಿಲ್ಲ. ಅಥವ ನಕಲಿ ಮೊಬೈಲ್ ಸಂಖ್ಯೆ ದಾಖಲಾಗಿರುತ್ತದೆ. ಹೀಗಾಗಿ ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಆದರೂ ನಗರದ ಸೈಬರ್ ವಿಭಾಗ ಅಪರಾಧಿಗಳ ಪತ್ತೆಗೆ ನಿರಂತರ ಪ್ರಯತ್ನ ಹಾಕುತ್ತಿದೆ. ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ ಎಂದು ವಿಶ್ವಾಸದಿಂದಲೇ ಹೇಳುತ್ತಾರೆ.

ಆಂದೋಲನ ಡೆಸ್ಕ್

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 mins ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

9 mins ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

14 mins ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

2 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

5 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

7 hours ago