ಮೈಸೂರು

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿವೆ.

ತಾಲ್ಲೂಕಿನ ಯಾಂದಳ್ಳಿ ಗ್ರಾಮದ ಸಪ್ತ ಮಾತೃಕೆ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಕಟ್ಟಡವನ್ನು ಬಾಡಿಗೆಗೆ ಪಡೆದಿದ್ದ ಎನ್‌ಸಿಬಿ ತಂಡದ ವಶದಲ್ಲಿರುವ ಗಣಪತ್ ಲಾಲ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಗಿರೀಶ್ ಬಾಬು ಎಂಬವರಿಗೆ ಸೇರಿದ ಕಟ್ಟಡವನ್ನು ಗಣಪತ್ ಬಾಡಿಗೆಗೆ ಪಡೆದಿದ್ದರು. ಆ ಕಟ್ಟಡದಲ್ಲಿ ಮಾದಕ ವಸ್ತು ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಪಡೆದ ಇನ್‌ಸ್ಪೆಕ್ಟರ್ ಎಂ.ಎಲ್.ಶೇಖರ್ ನೇತೃತ್ವದ ಪೊಲೀಸರ ತಂಡ ಶುಕ್ರವಾರ ರಾತ್ರಿ 7.15ಕ್ಕೆ ದಾಳಿ ನಡೆಸಿದೆ. ಕಟ್ಟಡದ ಒಂದನೇ ಅಂತಸ್ತಿನ ಕೊಠಡಿಯ ವಾಡ್ರೂಬ್‌ನ ಶೆಲ್ಛ್‌ಗಳಲ್ಲಿ ನಾನಾ ಕಂಪೆನಿಗಳ 11 ಸ್ಮಾರ್ಟ್ ಫೋನ್ ಪತ್ತೆಯಾಗಿವೆ.

ಕೆಳ ಭಾಗದಲ್ಲಿ ಕಪ್ಪು ಬಣ್ಣದ 360 ಗ್ರಾಂ ತೂಕದ ಪುಡಿ, 54 ಗ್ರಾಂ ತೂಕದ ಬಿಳಿ ಬಣ್ಣದ ಪುಡಿ, 957 ಗ್ರಾಂ ತೂಕದ ಬಿಳಿ ಬಣ್ಣದ ಪುಡಿ, 2933 ಗ್ರಾಂ ತೂಕದ ಗಸೆಗಸೆ ಮಾದರಿ ವಸ್ತು, ಕಪ್ಪು ಬಣ್ಣದ ಪೇಸ್ಟ್ ಮಾದರಿಯ ವಸ್ತು, ಬೋರಿಕ್ ಆಸಿಡ್ ಪತ್ತೆಯಾಗಿದೆ. ಇದರೊಂದಿಗೆ 13 ನೀಲಿ ಬಣ್ಣದ ಕ್ಯಾನ್‌ಗಳಲ್ಲಿ ಬಿಳಿ ಬಣ್ಣದ ಪೌಡರ್ ಸಿಕ್ಕಿದ್ದು, ಅವುಗಳನ್ನು ವಶಪಡಿಸಿಕೊಂಡು ಎಫ್ಎಸ್‌ಎಲ್ ಪರೀಕ್ಷೆಗೆ ಕಳಿಸಿಕೊಟ್ಟಿದ್ದಾರೆ‌.

ಮನೆ ಬಾಡಿಗೆ ಪಡೆದಿದ್ದ ಗಣಪತ್ ಲಾಲ್, ಅಲ್ಲಿ ವಾಸವಿದ್ದ ಭಜನ್ ಲಾಲ್ ಮತ್ತು ಆತನ ಪತ್ನಿ ವಿರುದ್ಧ ಎನ್‌ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

40 seconds ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

21 mins ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

1 hour ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

2 hours ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

13 hours ago