ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಡ್ರಗ್ಸ್ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿವೆ.
ತಾಲ್ಲೂಕಿನ ಯಾಂದಳ್ಳಿ ಗ್ರಾಮದ ಸಪ್ತ ಮಾತೃಕೆ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಕಟ್ಟಡವನ್ನು ಬಾಡಿಗೆಗೆ ಪಡೆದಿದ್ದ ಎನ್ಸಿಬಿ ತಂಡದ ವಶದಲ್ಲಿರುವ ಗಣಪತ್ ಲಾಲ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಗಿರೀಶ್ ಬಾಬು ಎಂಬವರಿಗೆ ಸೇರಿದ ಕಟ್ಟಡವನ್ನು ಗಣಪತ್ ಬಾಡಿಗೆಗೆ ಪಡೆದಿದ್ದರು. ಆ ಕಟ್ಟಡದಲ್ಲಿ ಮಾದಕ ವಸ್ತು ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಎಂ.ಎಲ್.ಶೇಖರ್ ನೇತೃತ್ವದ ಪೊಲೀಸರ ತಂಡ ಶುಕ್ರವಾರ ರಾತ್ರಿ 7.15ಕ್ಕೆ ದಾಳಿ ನಡೆಸಿದೆ. ಕಟ್ಟಡದ ಒಂದನೇ ಅಂತಸ್ತಿನ ಕೊಠಡಿಯ ವಾಡ್ರೂಬ್ನ ಶೆಲ್ಛ್ಗಳಲ್ಲಿ ನಾನಾ ಕಂಪೆನಿಗಳ 11 ಸ್ಮಾರ್ಟ್ ಫೋನ್ ಪತ್ತೆಯಾಗಿವೆ.
ಕೆಳ ಭಾಗದಲ್ಲಿ ಕಪ್ಪು ಬಣ್ಣದ 360 ಗ್ರಾಂ ತೂಕದ ಪುಡಿ, 54 ಗ್ರಾಂ ತೂಕದ ಬಿಳಿ ಬಣ್ಣದ ಪುಡಿ, 957 ಗ್ರಾಂ ತೂಕದ ಬಿಳಿ ಬಣ್ಣದ ಪುಡಿ, 2933 ಗ್ರಾಂ ತೂಕದ ಗಸೆಗಸೆ ಮಾದರಿ ವಸ್ತು, ಕಪ್ಪು ಬಣ್ಣದ ಪೇಸ್ಟ್ ಮಾದರಿಯ ವಸ್ತು, ಬೋರಿಕ್ ಆಸಿಡ್ ಪತ್ತೆಯಾಗಿದೆ. ಇದರೊಂದಿಗೆ 13 ನೀಲಿ ಬಣ್ಣದ ಕ್ಯಾನ್ಗಳಲ್ಲಿ ಬಿಳಿ ಬಣ್ಣದ ಪೌಡರ್ ಸಿಕ್ಕಿದ್ದು, ಅವುಗಳನ್ನು ವಶಪಡಿಸಿಕೊಂಡು ಎಫ್ಎಸ್ಎಲ್ ಪರೀಕ್ಷೆಗೆ ಕಳಿಸಿಕೊಟ್ಟಿದ್ದಾರೆ.
ಮನೆ ಬಾಡಿಗೆ ಪಡೆದಿದ್ದ ಗಣಪತ್ ಲಾಲ್, ಅಲ್ಲಿ ವಾಸವಿದ್ದ ಭಜನ್ ಲಾಲ್ ಮತ್ತು ಆತನ ಪತ್ನಿ ವಿರುದ್ಧ ಎನ್ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್ʻ…
ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…
ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…
ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…