ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಡ್ರಗ್ಸ್ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿವೆ.
ತಾಲ್ಲೂಕಿನ ಯಾಂದಳ್ಳಿ ಗ್ರಾಮದ ಸಪ್ತ ಮಾತೃಕೆ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಕಟ್ಟಡವನ್ನು ಬಾಡಿಗೆಗೆ ಪಡೆದಿದ್ದ ಎನ್ಸಿಬಿ ತಂಡದ ವಶದಲ್ಲಿರುವ ಗಣಪತ್ ಲಾಲ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಗಿರೀಶ್ ಬಾಬು ಎಂಬವರಿಗೆ ಸೇರಿದ ಕಟ್ಟಡವನ್ನು ಗಣಪತ್ ಬಾಡಿಗೆಗೆ ಪಡೆದಿದ್ದರು. ಆ ಕಟ್ಟಡದಲ್ಲಿ ಮಾದಕ ವಸ್ತು ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಎಂ.ಎಲ್.ಶೇಖರ್ ನೇತೃತ್ವದ ಪೊಲೀಸರ ತಂಡ ಶುಕ್ರವಾರ ರಾತ್ರಿ 7.15ಕ್ಕೆ ದಾಳಿ ನಡೆಸಿದೆ. ಕಟ್ಟಡದ ಒಂದನೇ ಅಂತಸ್ತಿನ ಕೊಠಡಿಯ ವಾಡ್ರೂಬ್ನ ಶೆಲ್ಛ್ಗಳಲ್ಲಿ ನಾನಾ ಕಂಪೆನಿಗಳ 11 ಸ್ಮಾರ್ಟ್ ಫೋನ್ ಪತ್ತೆಯಾಗಿವೆ.
ಕೆಳ ಭಾಗದಲ್ಲಿ ಕಪ್ಪು ಬಣ್ಣದ 360 ಗ್ರಾಂ ತೂಕದ ಪುಡಿ, 54 ಗ್ರಾಂ ತೂಕದ ಬಿಳಿ ಬಣ್ಣದ ಪುಡಿ, 957 ಗ್ರಾಂ ತೂಕದ ಬಿಳಿ ಬಣ್ಣದ ಪುಡಿ, 2933 ಗ್ರಾಂ ತೂಕದ ಗಸೆಗಸೆ ಮಾದರಿ ವಸ್ತು, ಕಪ್ಪು ಬಣ್ಣದ ಪೇಸ್ಟ್ ಮಾದರಿಯ ವಸ್ತು, ಬೋರಿಕ್ ಆಸಿಡ್ ಪತ್ತೆಯಾಗಿದೆ. ಇದರೊಂದಿಗೆ 13 ನೀಲಿ ಬಣ್ಣದ ಕ್ಯಾನ್ಗಳಲ್ಲಿ ಬಿಳಿ ಬಣ್ಣದ ಪೌಡರ್ ಸಿಕ್ಕಿದ್ದು, ಅವುಗಳನ್ನು ವಶಪಡಿಸಿಕೊಂಡು ಎಫ್ಎಸ್ಎಲ್ ಪರೀಕ್ಷೆಗೆ ಕಳಿಸಿಕೊಟ್ಟಿದ್ದಾರೆ.
ಮನೆ ಬಾಡಿಗೆ ಪಡೆದಿದ್ದ ಗಣಪತ್ ಲಾಲ್, ಅಲ್ಲಿ ವಾಸವಿದ್ದ ಭಜನ್ ಲಾಲ್ ಮತ್ತು ಆತನ ಪತ್ನಿ ವಿರುದ್ಧ ಎನ್ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…