ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಡ್ರಗ್ಸ್ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿವೆ.
ತಾಲ್ಲೂಕಿನ ಯಾಂದಳ್ಳಿ ಗ್ರಾಮದ ಸಪ್ತ ಮಾತೃಕೆ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಕಟ್ಟಡವನ್ನು ಬಾಡಿಗೆಗೆ ಪಡೆದಿದ್ದ ಎನ್ಸಿಬಿ ತಂಡದ ವಶದಲ್ಲಿರುವ ಗಣಪತ್ ಲಾಲ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಗಿರೀಶ್ ಬಾಬು ಎಂಬವರಿಗೆ ಸೇರಿದ ಕಟ್ಟಡವನ್ನು ಗಣಪತ್ ಬಾಡಿಗೆಗೆ ಪಡೆದಿದ್ದರು. ಆ ಕಟ್ಟಡದಲ್ಲಿ ಮಾದಕ ವಸ್ತು ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಎಂ.ಎಲ್.ಶೇಖರ್ ನೇತೃತ್ವದ ಪೊಲೀಸರ ತಂಡ ಶುಕ್ರವಾರ ರಾತ್ರಿ 7.15ಕ್ಕೆ ದಾಳಿ ನಡೆಸಿದೆ. ಕಟ್ಟಡದ ಒಂದನೇ ಅಂತಸ್ತಿನ ಕೊಠಡಿಯ ವಾಡ್ರೂಬ್ನ ಶೆಲ್ಛ್ಗಳಲ್ಲಿ ನಾನಾ ಕಂಪೆನಿಗಳ 11 ಸ್ಮಾರ್ಟ್ ಫೋನ್ ಪತ್ತೆಯಾಗಿವೆ.
ಕೆಳ ಭಾಗದಲ್ಲಿ ಕಪ್ಪು ಬಣ್ಣದ 360 ಗ್ರಾಂ ತೂಕದ ಪುಡಿ, 54 ಗ್ರಾಂ ತೂಕದ ಬಿಳಿ ಬಣ್ಣದ ಪುಡಿ, 957 ಗ್ರಾಂ ತೂಕದ ಬಿಳಿ ಬಣ್ಣದ ಪುಡಿ, 2933 ಗ್ರಾಂ ತೂಕದ ಗಸೆಗಸೆ ಮಾದರಿ ವಸ್ತು, ಕಪ್ಪು ಬಣ್ಣದ ಪೇಸ್ಟ್ ಮಾದರಿಯ ವಸ್ತು, ಬೋರಿಕ್ ಆಸಿಡ್ ಪತ್ತೆಯಾಗಿದೆ. ಇದರೊಂದಿಗೆ 13 ನೀಲಿ ಬಣ್ಣದ ಕ್ಯಾನ್ಗಳಲ್ಲಿ ಬಿಳಿ ಬಣ್ಣದ ಪೌಡರ್ ಸಿಕ್ಕಿದ್ದು, ಅವುಗಳನ್ನು ವಶಪಡಿಸಿಕೊಂಡು ಎಫ್ಎಸ್ಎಲ್ ಪರೀಕ್ಷೆಗೆ ಕಳಿಸಿಕೊಟ್ಟಿದ್ದಾರೆ.
ಮನೆ ಬಾಡಿಗೆ ಪಡೆದಿದ್ದ ಗಣಪತ್ ಲಾಲ್, ಅಲ್ಲಿ ವಾಸವಿದ್ದ ಭಜನ್ ಲಾಲ್ ಮತ್ತು ಆತನ ಪತ್ನಿ ವಿರುದ್ಧ ಎನ್ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…