drug
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಎಂಡಿಎಂಎ (ಗಾಂಜಾ) ಮೂಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು, ಇಷ್ಡು ದೊಡ್ಡ ಪ್ರಮಾಣದ ಮಾದಕ ವಸ್ತು ನಗರ ತಲುಪಿದ್ದು ಹೇಗೆ ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ.
ಕಳೆದ ವಾರ ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಗಮನ ಸೆಳೆದಿದ್ದ ಈ ಗಾಂಜ ಪತ್ತೆ, ಸಂಸತ್ತಿನಲ್ಲಿ ಪ್ರತಿಧ್ವನಿಸಿತ್ತು. ಮೈಸೂರು-ಕೊಡಗು ಸಂಸದ ಯದುವೀರ್ ವಿಷಯ ಪ್ರಸ್ತಾಪಿಸಿ ಪೊಲೀಸ್ ವೈಫಲ್ಯದ ಬಗ್ಗೆ ಪ್ರಶ್ನಿಸಿದ್ದರು. ಇದೀಗ ಬಹಿರಂಗಗೊಂಡಿರುವ ಮಾಹಿತಿ ಪ್ರಕಾರ, ಗಾಂಜ ಜಾಲದ ಮೂಲ ಮನಿ ಕ್ಯಾಪಿಟಲ್ ಸಿಟಿ ಮುಂಬೈ ಆಗಿದೆ. ಈ ಜಾಲ ಕೊರಿಯರ್ ಮೂಲಕ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ರವಾನೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜುಲೈ 04 ರಂದು ಕೇಂದ್ರ ಬಾಂಬೆಯ ಪ್ರದೇಶವೊಂದರಿಂದ ಬೆಂಗಳೂರಿಗೆ ಎಂಡಿಎಂಎ JD-ಕೊರಿಯರ್ ಮೂಲಕ ರವಾನೆಯಾಗಿದೆ. ಈ ಕೊರಿಯರ್ ಬೆಂಗಳೂರಿಂದ ಜು. 07 ರಂದು ಮೈಸೂರಿಗೆ ತಲುಪಿದೆ. 333 ಕೆ.ಜಿ ತೂಕದ ಗಾಂಜ ತುಂಬಿದ ಒಟ್ಟು 16 ರಿಂದ 17 ಬ್ಯಾಗುಗಳಲ್ಲಿ ಗಾಂಜ JD-ಕೊರಿಯರ್ ಮೂಲಕ ಮುಂಬೈನಿಂದ ಕರ್ನಾಟಕಕ್ಕೆ ರವಾನೆಯಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…