ಮೈಸೂರು

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ ರೀಲ್ಸ್ ಮತ್ತು ಸ್ಟೋರಿಗಳತ್ತ ಸ್ಥಳಾಂತರಗೊಂಡಿವೆ. ಈ ಬದಲಾವಣೆ ನೇರವಾಗಿ ಯುವ ಮತದಾರರನ್ನು, ಅಂದರೆ ಜೆನ್-ಝೀ ಜನರನ್ನು ಗುರಿಯಾಗಿಸಿಕೊಂಡಿದೆ.

ಕಳೆದ ಕೆಲ ತಿಂಗಳಿನಿಂದ ನೀಟ್‌ ವಿವಾದ, ಉದ್ಯೋಗ ಸೇರಿದಂತೆ ಹಲವು ವಿಷಯಗಳಲ್ಲಿ ಪ್ರತಿಭಟನೆಗಳು ಇನ್‌ಸ್ಟಾಗ್ರಾಂನಿಂದಲೇ ಸಂಘಟನೆಯಾಗುತ್ತಿವೆ. ಕಾಕ್ರೋಚ್‌ ಜನತಾ ಪಾರ್ಟಿ ಅಂತಹ ಯುವ ಸಂಘಟನೆಗಳು ರೀಲ್ಸ್, ಮೀಮ್ಸ್ ಮೂಲಕ ಸರ್ಕಾರದ ವಿರುದ್ಧ ಅಭಿಯಾನ ನಡೆಸುತ್ತಿವೆ. 15 ಸೆಕೆಂಡಿನ ವಿಡಿಯೋವೊಂದೇ ಲಕ್ಷಾಂತರ ವೀಕ್ಷಣೆ ಪಡೆದು ಬೀದಿಗಿಳಿಯುವಂತೆ ಮಾಡುತ್ತಿದೆ.

ಇದರಿಂದ ಕೇಂದ್ರ ಸರ್ಕಾರಕ್ಕೆ ಹೊಸ ಸವಾಲು ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ 10 ಕೋಟಿಗೂ ಅಧಿಕ ಫಾಲೋವರ್ಸ್ ಹೊಂದಿದ್ದರೂ, ಇನ್‌ಸ್ಟಾಗ್ರಾಂನಲ್ಲಿ ಜೆನ್-ಝೀ ಜೊತೆ ನೇರ ಸಂಪರ್ಕ ಸಾಧಿಸುವುದು ಕಷ್ಟವಾಗಿದೆ. “ಯುವಕರ ಭಾವನೆ, ಆಕಾಂಕ್ಷೆಗಳಿಗೆ ಗೌರವ ನೀಡುತ್ತೇವೆ” ಎಂದು ಮೋದಿ ಹೇಳಿದ್ದರೂ, ರೀಲ್ಸ್ ಯುಗದ ರಾಜಕೀಯಕ್ಕೆ ಹೊಂದಿಕೊಳ್ಳುವ ಒತ್ತಡ ಹೆಚ್ಚಿದೆ. ಇಷ್ಟು ದಿನ ರಾಜಕೀಯ ಚರ್ಚೆಗಳು ಮತ್ತು ಪ್ರಚಾರಗಳು ಹೆಚ್ಚಾಗಿ ಎಕ್ಸ್‌ ‌ಅಥವಾ ಫೇಸ್‌ಬುಕ್‌ನಲ್ಲಿ ನಡೆಯುತ್ತಿದ್ದವು. ಆದರೆ, ಇಂದಿನ ಜೆನ್‌-ಝೀ ಇನ್‌ಸ್ಟಾಗ್ರಾಮ್‌ ಅನ್ನೇ ತಮ್ಮ ಅಸ್ತ್ರವನ್ನಾಗಿಸಿಕೊಂಡಿದ್ದಾರೆ.

ರಾಜಕೀಯ ವಿಶ್ಲೇಷಕರ ಪ್ರಕಾರ, 2024 ರ ಲೋಕಸಭಾ ಚುನಾವಣೆಯಲ್ಲಿ ಯುವ ಮತದಾರರು ನಿರ್ಣಾಯಕರಾಗಿದ್ದರು. ಈಗ ಇನ್‌ಸ್ಟಾಗ್ರಾಂ ಮೂಲಕ ಸಂಘಟಿತವಾಗುತ್ತಿರುವ ಜೆನ್-ಝೀ ಅಸಮಾಧಾನ ಮುಂದಿನ ಚುನಾವಣೆಯಲ್ಲಿ ದೊಡ್ಡ ಪರಿಣಾಮ ಬೀರಬಹುದು. ಸರ್ಕಾರ ಈಗ ಡಿಜಿಟಲ್ ಸಂವಹನ ತಂತ್ರವನ್ನು ಮರುರೂಪಿಸುವ ಅನಿವಾರ್ಯತೆಯಲ್ಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago