ಮೈಸೂರು: ಜೆ.ಪಿ.ನಗರದಲ್ಲಿರುವ ಹಿಂದೂಸ್ಥಾನ್ ಕಾಲೇಜು ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ವಿವಿಧ ಸಂಸ್ಥೆಗಳಿಂದ ಮೇ೧೭ ರಂದು ಬೆಳಿಗ್ಗೆ ೯.೩೦ಕ್ಕೆ ಪೂಲ್ ಕ್ಯಾಂಪಸ್ ಪ್ಲೇಸ್ಮೆಂಟ್ ಡ್ರೈವ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ವಾಣಿಜ್ಯಶಾಶ್ತ್ರ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ವಿ. ಈಶ್ವರ್ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಕಾಲೇಜಿನಲ್ಲಿ ಬಿ.ಕಾಂ. ಬಿಸಿಎ ಹಾಗೂ ಬಿಬಿಎ ಪದವಿ ಕೋರ್ಸ್ಗಳನ್ನು ಹೊಂದಿದ್ದು, ಪ್ರವೇಶಾತಿ ಪ್ರಾರಂಭವಾಗಿದೆ. ಇದೇ ಶುಕ್ರವಾರ ನಡೆಯುವ ಕಾರ್ಯಕ್ರಮಕ್ಕೆ ಪ್ರತಿಷ್ಠಿತ ಸಂಸ್ಥೆಗಳಾದ ಈಕ್ವಲೈಜ್ ಆರ್ಸಿಎಂ, ಕ್ರಿಯಾ ನೆಕ್ಸ್ಟ್ ವೆಲ್ತ್, ಟಿವಿಎಸ್ ಟ್ರೈನಿಂಗ್ ಅಂಡ್ ಸರ್ವಿಸಸ್, ಎಎಟಿ, ಜಸ್ಟ್ ಡಯಲ್, ರ್ಯಾಂಕ್ ನುಕ್, ಸೋರ್ಸ್ ಹಬ್, ಪ್ಲಾನ್ ಸೀ, ಮುತ್ತೂಟ್ ಫೈನಾನ್ಸ್ ಗ್ಲೋಟಚ್ ಮೊದಲ್ದಾ ಕಂಪನಿಗಳು ನಮ್ಮೊಡನೆ ಭಾಗವಹಿಸಲಿವೆ ಎಂದು ಹೇಳಿದರು.
ಈ ಕಾರ್ಯಕ್ರಮಕ್ಕೆ ೨೦೧೮-೨೦೨೩ ರೊಳಗೆ ತೇರ್ಗಡೆಯಾಗಿರುವ ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಂತಿಮ ಪದವಿಯಲ್ಲಿ ವ್ಯಾಸಂಗಮಾಡುತ್ತಿರುವ, ಸ್ನಾತಕ, ಸ್ನಾತಕೋತ್ತರ ಹಾಗೂ ಇಂಜಿನಿಯರ್ ವಿದ್ಯಾರ್ಥಿಗಳಿಗೆ ಪ್ರಾಧ್ಯನತೆಯನ್ನು ನೀಡಿದೆ. ಈ ಕಾರ್ಯಕ್ರಮಕ್ಕೆ ಭಾಗವಹಿಸಲು ವಿದ್ಯಾರ್ಥಿಗಳಿಗೆ ಉಚಿತ ನೋದಂಣಿಗೆ ಅವಕಾಶವಿರುತ್ತದೆ. ಭಾಗವಹಿಸಲು ಇಚ್ಛಿಸುವಂತಹ ವಿದ್ಯಾರ್ಥಿಗಳು ಸ್ವ-ವಿವರ ಪ್ರತಿ, ಆಧಾರ್ ಕಾರ್ಡ್ ,ಫೋಟೋ ಹಾಗೂ ಅಂಕಗಳ ಪಟ್ಟಿಗಳ ಪ್ರತಿಯನ್ನು ತರಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹಿಂದೂಸ್ಥಾನ್ ಕಾಲೇಜಿನ ವಿಶೇಷಾಧಿಕಾರಿ ಎಬೆಲ್ ಮ್ಯಾಥ್ಯು, ಕನ್ನಡ ವಿಭಾಗದ ಪ್ರಾಧ್ಯಪಕ ಚಂದ್ರಮೋಹನ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಎಸ್.ವಿನಂತಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…
ಕೊಡಗು: ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ…
ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…