ಮೈಸೂರು

ಹಿಂದೂಸ್ಥಾನ್ ಕಾಲೇಜು ವತಿಯಿಂದ ಪೂಲ್ ಕ್ಯಾಂಪಸ್ ಪ್ಲೇಸ್‌ಮೆಂಟ್ ಡ್ರೈವ್

ಮೈಸೂರು: ಜೆ.ಪಿ.ನಗರದಲ್ಲಿರುವ ಹಿಂದೂಸ್ಥಾನ್ ಕಾಲೇಜು ಟ್ರೈನಿಂಗ್ ಅಂಡ್ ಪ್ಲೇಸ್‌ಮೆಂಟ್ ಸೆಲ್ ಹಾಗೂ ವಿವಿಧ ಸಂಸ್ಥೆಗಳಿಂದ ಮೇ೧೭ ರಂದು ಬೆಳಿಗ್ಗೆ ೯.೩೦ಕ್ಕೆ ಪೂಲ್ ಕ್ಯಾಂಪಸ್ ಪ್ಲೇಸ್‌ಮೆಂಟ್ ಡ್ರೈವ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ವಾಣಿಜ್ಯಶಾಶ್ತ್ರ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ವಿ. ಈಶ್ವರ್ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಕಾಲೇಜಿನಲ್ಲಿ ಬಿ.ಕಾಂ. ಬಿಸಿಎ ಹಾಗೂ ಬಿಬಿಎ ಪದವಿ ಕೋರ್ಸ್‌ಗಳನ್ನು ಹೊಂದಿದ್ದು, ಪ್ರವೇಶಾತಿ ಪ್ರಾರಂಭವಾಗಿದೆ. ಇದೇ ಶುಕ್ರವಾರ ನಡೆಯುವ ಕಾರ್ಯಕ್ರಮಕ್ಕೆ ಪ್ರತಿಷ್ಠಿತ ಸಂಸ್ಥೆಗಳಾದ ಈಕ್ವಲೈಜ್ ಆರ್‌ಸಿಎಂ, ಕ್ರಿಯಾ ನೆಕ್ಸ್ಟ್ ವೆಲ್ತ್, ಟಿವಿಎಸ್ ಟ್ರೈನಿಂಗ್ ಅಂಡ್ ಸರ್ವಿಸಸ್, ಎಎಟಿ, ಜಸ್ಟ್ ಡಯಲ್, ರ್ಯಾಂಕ್ ನುಕ್, ಸೋರ್ಸ್ ಹಬ್, ಪ್ಲಾನ್ ಸೀ, ಮುತ್ತೂಟ್ ಫೈನಾನ್ಸ್ ಗ್ಲೋಟಚ್ ಮೊದಲ್ದಾ ಕಂಪನಿಗಳು ನಮ್ಮೊಡನೆ ಭಾಗವಹಿಸಲಿವೆ ಎಂದು ಹೇಳಿದರು.

ಈ ಕಾರ್ಯಕ್ರಮಕ್ಕೆ ೨೦೧೮-೨೦೨೩ ರೊಳಗೆ ತೇರ್ಗಡೆಯಾಗಿರುವ ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಂತಿಮ ಪದವಿಯಲ್ಲಿ ವ್ಯಾಸಂಗಮಾಡುತ್ತಿರುವ, ಸ್ನಾತಕ, ಸ್ನಾತಕೋತ್ತರ ಹಾಗೂ ಇಂಜಿನಿಯರ್ ವಿದ್ಯಾರ್ಥಿಗಳಿಗೆ ಪ್ರಾಧ್ಯನತೆಯನ್ನು ನೀಡಿದೆ. ಈ ಕಾರ್ಯಕ್ರಮಕ್ಕೆ ಭಾಗವಹಿಸಲು ವಿದ್ಯಾರ್ಥಿಗಳಿಗೆ ಉಚಿತ ನೋದಂಣಿಗೆ ಅವಕಾಶವಿರುತ್ತದೆ. ಭಾಗವಹಿಸಲು ಇಚ್ಛಿಸುವಂತಹ ವಿದ್ಯಾರ್ಥಿಗಳು ಸ್ವ-ವಿವರ ಪ್ರತಿ, ಆಧಾರ್ ಕಾರ್ಡ್ ,ಫೋಟೋ ಹಾಗೂ ಅಂಕಗಳ ಪಟ್ಟಿಗಳ ಪ್ರತಿಯನ್ನು ತರಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಿಂದೂಸ್ಥಾನ್ ಕಾಲೇಜಿನ ವಿಶೇಷಾಧಿಕಾರಿ ಎಬೆಲ್ ಮ್ಯಾಥ್ಯು, ಕನ್ನಡ ವಿಭಾಗದ ಪ್ರಾಧ್ಯಪಕ ಚಂದ್ರಮೋಹನ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಎಸ್.ವಿನಂತಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago