ಮೈಸೂರು: ಜೆ.ಪಿ.ನಗರದಲ್ಲಿರುವ ಹಿಂದೂಸ್ಥಾನ್ ಕಾಲೇಜು ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ವಿವಿಧ ಸಂಸ್ಥೆಗಳಿಂದ ಮೇ೧೭ ರಂದು ಬೆಳಿಗ್ಗೆ ೯.೩೦ಕ್ಕೆ ಪೂಲ್ ಕ್ಯಾಂಪಸ್ ಪ್ಲೇಸ್ಮೆಂಟ್ ಡ್ರೈವ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ವಾಣಿಜ್ಯಶಾಶ್ತ್ರ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ವಿ. ಈಶ್ವರ್ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಕಾಲೇಜಿನಲ್ಲಿ ಬಿ.ಕಾಂ. ಬಿಸಿಎ ಹಾಗೂ ಬಿಬಿಎ ಪದವಿ ಕೋರ್ಸ್ಗಳನ್ನು ಹೊಂದಿದ್ದು, ಪ್ರವೇಶಾತಿ ಪ್ರಾರಂಭವಾಗಿದೆ. ಇದೇ ಶುಕ್ರವಾರ ನಡೆಯುವ ಕಾರ್ಯಕ್ರಮಕ್ಕೆ ಪ್ರತಿಷ್ಠಿತ ಸಂಸ್ಥೆಗಳಾದ ಈಕ್ವಲೈಜ್ ಆರ್ಸಿಎಂ, ಕ್ರಿಯಾ ನೆಕ್ಸ್ಟ್ ವೆಲ್ತ್, ಟಿವಿಎಸ್ ಟ್ರೈನಿಂಗ್ ಅಂಡ್ ಸರ್ವಿಸಸ್, ಎಎಟಿ, ಜಸ್ಟ್ ಡಯಲ್, ರ್ಯಾಂಕ್ ನುಕ್, ಸೋರ್ಸ್ ಹಬ್, ಪ್ಲಾನ್ ಸೀ, ಮುತ್ತೂಟ್ ಫೈನಾನ್ಸ್ ಗ್ಲೋಟಚ್ ಮೊದಲ್ದಾ ಕಂಪನಿಗಳು ನಮ್ಮೊಡನೆ ಭಾಗವಹಿಸಲಿವೆ ಎಂದು ಹೇಳಿದರು.
ಈ ಕಾರ್ಯಕ್ರಮಕ್ಕೆ ೨೦೧೮-೨೦೨೩ ರೊಳಗೆ ತೇರ್ಗಡೆಯಾಗಿರುವ ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಂತಿಮ ಪದವಿಯಲ್ಲಿ ವ್ಯಾಸಂಗಮಾಡುತ್ತಿರುವ, ಸ್ನಾತಕ, ಸ್ನಾತಕೋತ್ತರ ಹಾಗೂ ಇಂಜಿನಿಯರ್ ವಿದ್ಯಾರ್ಥಿಗಳಿಗೆ ಪ್ರಾಧ್ಯನತೆಯನ್ನು ನೀಡಿದೆ. ಈ ಕಾರ್ಯಕ್ರಮಕ್ಕೆ ಭಾಗವಹಿಸಲು ವಿದ್ಯಾರ್ಥಿಗಳಿಗೆ ಉಚಿತ ನೋದಂಣಿಗೆ ಅವಕಾಶವಿರುತ್ತದೆ. ಭಾಗವಹಿಸಲು ಇಚ್ಛಿಸುವಂತಹ ವಿದ್ಯಾರ್ಥಿಗಳು ಸ್ವ-ವಿವರ ಪ್ರತಿ, ಆಧಾರ್ ಕಾರ್ಡ್ ,ಫೋಟೋ ಹಾಗೂ ಅಂಕಗಳ ಪಟ್ಟಿಗಳ ಪ್ರತಿಯನ್ನು ತರಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹಿಂದೂಸ್ಥಾನ್ ಕಾಲೇಜಿನ ವಿಶೇಷಾಧಿಕಾರಿ ಎಬೆಲ್ ಮ್ಯಾಥ್ಯು, ಕನ್ನಡ ವಿಭಾಗದ ಪ್ರಾಧ್ಯಪಕ ಚಂದ್ರಮೋಹನ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಎಸ್.ವಿನಂತಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…