ಮೈಸೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಕೆ, ಮಾರಾಟ ಹಾಗೂ ಯಾವುದೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಈ ಆದೇಶವನ್ನು ಉಲ್ಲಂಘಸಿದ್ದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ತಿಳಿಸಿದರು.
ಅವರು ಇಂದು(ಆ.23) ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ ಗೌರಿ -ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿ ಮತ್ತು ಮಣ್ಣಿನ ಗೌರಿ ಮತ್ತು ಗಣೇಶ ಮೂರ್ತಿಗಳನ್ನು ಪೂಜಿಸಿ ಸರಳ ಆಚರಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿಷೇಧಿತ ಪಿ.ಓ.ಪಿ. ಗಣೇಶ ಮೂರ್ತಿಗಳಿರುವ ಬಗ್ಗೆ ಮಾಹಿತಿ, ದೂರು ಸ್ವೀಕೃತವಾದರೆ, ಪ್ರತಿದಿನ ಅಧಿಕಾರಿಗಳು ಗಸ್ತು ತಿರುಗಿ ಕ್ರಮಕೈಗೊಳ್ಳಬೇಕು. ಪಿ.ಒ.ಪಿ. ವಿಗ್ರಹಗಳೆಂದು ಖಚಿತಪಟ್ಟಲ್ಲಿ ನಿಯಮಾನುಸಾರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗದಂತೆ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.
ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಸಾರ್ವಜನಿಕರಿಗೆ ದೂರದರ್ಶನ ಜಾಹಿರಾತು ಮತ್ತು ಜನ ಜಾಗೃತಿ ಶಿಬಿರಗಳನ್ನು ಹಮ್ಮಿಕೊಳ್ಳಬೇಕು. ವಿಗ್ರಹ ತಯಾರಕರು, ಮಾರಾಟಗಾರರು ಮತ್ತು ಗಣಪತಿ ಕೂರಿಸುವ ಸಂಘ ಸಂಸ್ಥೆಗಳಿಗೆ ಅನುಮತಿ ನೀಡಲು ಪೋಲಿಸ್ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ಅಗ್ನಿಶಾಮಕದಳ ಇಲಾಖೆಗಳನೊಳಗೊಂಡ ಏಕಗವಾಕ್ಷಿ ಸಮಿತಿಯನ್ನು ರಚಿಸಲು ಸೂಚಿಸಿ, ಆ ಸಮಿತಿಯು ಗಣೇಶ ಮೂರ್ತಿ ಸ್ಥಾಪನೆಗೆ ಕೋರಿ ಸಲ್ಲಿಸುವ ಅರ್ಜಿಯನ್ನು 24 ಗಂಟೆಯೊಳಗೆ ವಿಲೇವಾರಿ ಮಾಡಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ವಿಗ್ರಹ ತಯಾರಕರು ಮತ್ತು ಮಾರಾಟಗಾರರು ಕಡ್ಡಾಯವಾಗಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿದ್ದಲ್ಲಿ ಷರತ್ತುಬದ್ಧ ಪ್ರಮಾಣ ಪತ್ರವನ್ನು ನೀಡಬೇಕು. ತಾಲ್ಲೂಕು ಮಟ್ಟದ ಕಾರ್ಯಪಡೆಯಲ್ಲಿ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಮುಖ್ಯಾಧಿಕಾರಿಗಳು, ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿದ್ದು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಪಿ.ಓ.ಪಿ. ವಿಗ್ರಹಗಳನ್ನು ಪರಿಶೀಲಿಸಿ ಮುಟ್ಟುಗೋಲು ಹಾಕಿಕೊಳ್ಳಲು ಸೂಕ್ತ ಕ್ರಮವಹಿಸಬೇಕು ಎಂದರು.
ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ/ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಗೌರಿ ಗಣೇಶ ಮೂರ್ತಿಗಳನ್ನು ಮೈಸೂರು ಮಹಾನಗರ ಪಾಲಿಕೆ , ನಗರಸಭೆ, ಪುರಸಭೆ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸುವುದು ಹಾಗೂ ಈ ಸಂಬಂಧ ಜಾಹಿರಾತು ಹೊರಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಮೈಸೂರು ಮಹಾನಗರ ಪಾಲಿಕೆ / ನಗರಸಭೆ / ಪುರಸಭೆ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಸ್ಥಾಪನೆಯನ್ನು ಗುರುತಿಸಿ, ಉತ್ತೇಜಿಸಲು ಕ್ರಮವಹಿಸಬೇಕು ಹಾಗೂ ರಾತ್ರಿ 10 ಗಂಟೆಯಿಂದ ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಬೇಕು ಎಂದರು.
ಗಣೇಶ ಹಬ್ಬದ ಆಚರಣೆಯ ಸಮಯದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರುಶುಭಾ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…