ಮೈಸೂರು : ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ನಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎಫ್ಐಆರ್ನಲ್ಲಿ ಏನಿದೆ?
ಅ. 16ರಂದು ರಾತ್ರಿ 9:20 ಗಂಟೆಗೆ ಸೋಮೇಗೌಡ ಬಿನ್ ಲೇಟ್ ಮಲೆಗೌಡ ಎಂಬುವರ ದೂರಿನ ಸಾರಾಂಶವೆನೆಂದರೆ, ನಾನು ವ್ಯವಸಾಯ ಕಸುಬನ್ನು ಮಾಡಿಕೊಂಡಿರುತ್ತೇನೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಮೂರು ತಿಂಗಳ ಹಿಂದೆ ಹೊಳೆನರಸೀಪುರ ತಾಲೂಕಿನ ಮರಹಳ್ಳಿ ಗ್ರಾಮದ ವ್ಯಕ್ತಿ ಜೊತೆಗೆ ಮಗಳ ಮದುವೆ ಮಾಡಿರುತ್ತೇನೆ. ನನ್ನ ಮಗಳು ಮತ್ತು ಅಳಿಯ ಅನ್ಯೋನ್ಯವಾಗಿದ್ದರು.
ದೀಪಾವಳಿ ಹಬ್ಬದ ಹಿನ್ನೆಲೆ ನನ್ನ ಮಗಳು ನಮ್ಮ ಮನೆಗೆ ಬಂದಿದ್ದಳು. ಹೀಗಿರುವಾಗ ಅ.16ರಂದು ಬೆಳಿಗ್ಗೆ 10 ಗಂಟೆಗೆ ನನ್ನ ಸಂಬಂಧಿಕರು ನಮ್ಮ ಜಮೀನಿನ ಬಳಿ ಸಿಕ್ಕು, ನಿಮ್ಮ ಮಗಳು ಮತ್ತು ನಿಮ್ಮೂರಿನ ಲೋಹಿತ್ ಅಲಿಯಾಸ್ ರಾಜಿ ಇಬ್ಬರ ಅಶ್ಲೀಲ ವಿಡಿಯೋ ಮಲ್ಲಿಕಾರ್ಜುನ ಎಂಬುವವರ ವಾಟ್ಸಾಪ್ ನಂಬರ್ಗೆ ಬಂದಿದ್ದು, ಆತನು ನನ್ನ ವಾಟ್ಸಾಪ್ ನಂಬರ್ಗೆ ಕಳುಹಿಸಿದ್ದು, ಏನೆಂದು ವಿಡಿಯೋ ನೋಡಲಾಗಿ ಅದು ನಿಮ್ಮ ಮಗಳ ಮತ್ತು ಲೋಹಿತ್ ಅಶ್ಲೀಲ ವಿಡಿಯೋ ಆಗಿತ್ತು. ಬಳಿಕ ಡಿಲೀಟ್ ಮಾಡಿರುವುದಾಗಿ ನನಗೆ ಹೇಳಿದ್ದಾರೆ.
ನಮಗೂ ನಮ್ಮೂರಿನ ಲೋಹಿತ್ ಎಂಬುವನಿಗೂ ಜಮೀನು ದಾರಿ ವಿಚಾರವಾಗಿ ಆಗಾಗ ಗಲಾಟೆಯಾಗಿದ್ದು, ನಿನಗೆ ಮತ್ತು ನಿಮ್ಮ ಕುಟುಂಬಕ್ಕೆ ಒಂದು ಗತಿ ಕಾಣಿಸುತ್ತೇನೆ ನೋಡು, ಒಂದಲ್ಲ ಒಂದು ದಿನ ನಿಮ್ಮನ್ನು ಕೊಲೆ ಮಾಡದೇ ಬಿಡುವುದಿಲ್ಲವೆಂದು ಪದೇ ಪದೇ ಹೇಳುತ್ತಿದ್ದನು. ಈ ದ್ವೇಷದಿಂದ ನನ್ನ ಮಗಳ ಮತ್ತು ನಮ್ಮ ಕುಟುಂಬದ ಮಾನಮರ್ಯಾದೆಯನ್ನು ಬೀದಿ ಪಾಲು ಮಾಡುವ ಉದ್ದೇಶದಿಂದ ನನ್ನ ಮಗಳೊಂದಿಗೆ ತೋಡಗಿದ ವಿಡಿಯೋವನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡು ಎಲ್ಲರಿಗೂ ವಾಟ್ಸಾಪ್ನಲ್ಲಿ ಕಳುಹಿಸಿ, ನನ್ನ ಮಗಳ ಮತ್ತು ನಮ್ಮ ಸಂಸಾರವನ್ನು ಹಾಳು ಮಾಡಿರುತ್ತಾನೆ. ಆದ್ದರಿಂದ ಲೋಹಿತ್ ಅಲಿಯಾಸ್ ರಾಜಿ ಎಂಬುವನ ಮೇಲೆ ಕಾನೂನು ಕ್ರಮ ಜರುಗಿಸಿ ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ಕೊಡಿಸುವಂತೆ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…