ಮೈಸೂರು

ವಿವಾಹಿತ ಪುತ್ರಿಯ ಅಶ್ಲೀಲ ವಿಡಿಯೋ ವೈರಲ್‌ : ಕೈ ಮುಖಂಡನ ವಿರುದ್ಧ ತಂದೆ ದೂರು

ಮೈಸೂರು : ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ನಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?
ಅ. 16ರಂದು ರಾತ್ರಿ 9:20 ಗಂಟೆಗೆ ಸೋಮೇಗೌಡ ಬಿನ್ ಲೇಟ್ ಮಲೆಗೌಡ ಎಂಬುವರ ದೂರಿನ ಸಾರಾಂಶವೆನೆಂದರೆ, ನಾನು ವ್ಯವಸಾಯ ಕಸುಬನ್ನು ಮಾಡಿಕೊಂಡಿರುತ್ತೇನೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಮೂರು ತಿಂಗಳ ಹಿಂದೆ ಹೊಳೆನರಸೀಪುರ ತಾಲೂಕಿನ ಮರಹಳ್ಳಿ ಗ್ರಾಮದ ವ್ಯಕ್ತಿ ಜೊತೆಗೆ ಮಗಳ ಮದುವೆ ಮಾಡಿರುತ್ತೇನೆ. ನನ್ನ ಮಗಳು ಮತ್ತು ಅಳಿಯ ಅನ್ಯೋನ್ಯವಾಗಿದ್ದರು.

ದೀಪಾವಳಿ ಹಬ್ಬದ ಹಿನ್ನೆಲೆ ನನ್ನ ಮಗಳು ನಮ್ಮ ಮನೆಗೆ ಬಂದಿದ್ದಳು. ಹೀಗಿರುವಾಗ ಅ.16ರಂದು ಬೆಳಿಗ್ಗೆ 10 ಗಂಟೆಗೆ ನನ್ನ ಸಂಬಂಧಿಕರು ನಮ್ಮ ಜಮೀನಿನ ಬಳಿ ಸಿಕ್ಕು, ನಿಮ್ಮ ಮಗಳು ಮತ್ತು ನಿಮ್ಮೂರಿನ ಲೋಹಿತ್ ಅಲಿಯಾಸ್ ರಾಜಿ ಇಬ್ಬರ ಅಶ್ಲೀಲ ವಿಡಿಯೋ ಮಲ್ಲಿಕಾರ್ಜುನ ಎಂಬುವವರ ವಾಟ್ಸಾಪ್ ನಂಬರ್‌ಗೆ ಬಂದಿದ್ದು, ಆತನು ನನ್ನ ವಾಟ್ಸಾಪ್ ನಂಬರ್‌ಗೆ ಕಳುಹಿಸಿದ್ದು, ಏನೆಂದು ವಿಡಿಯೋ ನೋಡಲಾಗಿ ಅದು ನಿಮ್ಮ ಮಗಳ ಮತ್ತು ಲೋಹಿತ್ ಅಶ್ಲೀಲ ವಿಡಿಯೋ ಆಗಿತ್ತು. ಬಳಿಕ ಡಿಲೀಟ್ ಮಾಡಿರುವುದಾಗಿ ನನಗೆ ಹೇಳಿದ್ದಾರೆ.

ನಮಗೂ ನಮ್ಮೂರಿನ ಲೋಹಿತ್ ಎಂಬುವನಿಗೂ ಜಮೀನು ದಾರಿ ವಿಚಾರವಾಗಿ ಆಗಾಗ ಗಲಾಟೆಯಾಗಿದ್ದು, ನಿನಗೆ ಮತ್ತು ನಿಮ್ಮ ಕುಟುಂಬಕ್ಕೆ ಒಂದು ಗತಿ ಕಾಣಿಸುತ್ತೇನೆ ನೋಡು, ಒಂದಲ್ಲ ಒಂದು ದಿನ ನಿಮ್ಮನ್ನು ಕೊಲೆ ಮಾಡದೇ ಬಿಡುವುದಿಲ್ಲವೆಂದು ಪದೇ ಪದೇ ಹೇಳುತ್ತಿದ್ದನು. ಈ ದ್ವೇಷದಿಂದ ನನ್ನ ಮಗಳ ಮತ್ತು ನಮ್ಮ ಕುಟುಂಬದ ಮಾನಮರ್ಯಾದೆಯನ್ನು ಬೀದಿ ಪಾಲು ಮಾಡುವ ಉದ್ದೇಶದಿಂದ ನನ್ನ ಮಗಳೊಂದಿಗೆ ತೋಡಗಿದ ವಿಡಿಯೋವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು ಎಲ್ಲರಿಗೂ ವಾಟ್ಸಾಪ್‌ನಲ್ಲಿ ಕಳುಹಿಸಿ, ನನ್ನ ಮಗಳ ಮತ್ತು ನಮ್ಮ ಸಂಸಾರವನ್ನು ಹಾಳು ಮಾಡಿರುತ್ತಾನೆ. ಆದ್ದರಿಂದ ಲೋಹಿತ್ ಅಲಿಯಾಸ್ ರಾಜಿ ಎಂಬುವನ ಮೇಲೆ ಕಾನೂನು ಕ್ರಮ ಜರುಗಿಸಿ ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ಕೊಡಿಸುವಂತೆ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

3 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

3 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

3 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

3 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

4 hours ago