ಮೈಸೂರು

ವಿವಾಹಿತ ಪುತ್ರಿಯ ಅಶ್ಲೀಲ ವಿಡಿಯೋ ವೈರಲ್‌ : ಕೈ ಮುಖಂಡನ ವಿರುದ್ಧ ತಂದೆ ದೂರು

ಮೈಸೂರು : ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ನಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?
ಅ. 16ರಂದು ರಾತ್ರಿ 9:20 ಗಂಟೆಗೆ ಸೋಮೇಗೌಡ ಬಿನ್ ಲೇಟ್ ಮಲೆಗೌಡ ಎಂಬುವರ ದೂರಿನ ಸಾರಾಂಶವೆನೆಂದರೆ, ನಾನು ವ್ಯವಸಾಯ ಕಸುಬನ್ನು ಮಾಡಿಕೊಂಡಿರುತ್ತೇನೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಮೂರು ತಿಂಗಳ ಹಿಂದೆ ಹೊಳೆನರಸೀಪುರ ತಾಲೂಕಿನ ಮರಹಳ್ಳಿ ಗ್ರಾಮದ ವ್ಯಕ್ತಿ ಜೊತೆಗೆ ಮಗಳ ಮದುವೆ ಮಾಡಿರುತ್ತೇನೆ. ನನ್ನ ಮಗಳು ಮತ್ತು ಅಳಿಯ ಅನ್ಯೋನ್ಯವಾಗಿದ್ದರು.

ದೀಪಾವಳಿ ಹಬ್ಬದ ಹಿನ್ನೆಲೆ ನನ್ನ ಮಗಳು ನಮ್ಮ ಮನೆಗೆ ಬಂದಿದ್ದಳು. ಹೀಗಿರುವಾಗ ಅ.16ರಂದು ಬೆಳಿಗ್ಗೆ 10 ಗಂಟೆಗೆ ನನ್ನ ಸಂಬಂಧಿಕರು ನಮ್ಮ ಜಮೀನಿನ ಬಳಿ ಸಿಕ್ಕು, ನಿಮ್ಮ ಮಗಳು ಮತ್ತು ನಿಮ್ಮೂರಿನ ಲೋಹಿತ್ ಅಲಿಯಾಸ್ ರಾಜಿ ಇಬ್ಬರ ಅಶ್ಲೀಲ ವಿಡಿಯೋ ಮಲ್ಲಿಕಾರ್ಜುನ ಎಂಬುವವರ ವಾಟ್ಸಾಪ್ ನಂಬರ್‌ಗೆ ಬಂದಿದ್ದು, ಆತನು ನನ್ನ ವಾಟ್ಸಾಪ್ ನಂಬರ್‌ಗೆ ಕಳುಹಿಸಿದ್ದು, ಏನೆಂದು ವಿಡಿಯೋ ನೋಡಲಾಗಿ ಅದು ನಿಮ್ಮ ಮಗಳ ಮತ್ತು ಲೋಹಿತ್ ಅಶ್ಲೀಲ ವಿಡಿಯೋ ಆಗಿತ್ತು. ಬಳಿಕ ಡಿಲೀಟ್ ಮಾಡಿರುವುದಾಗಿ ನನಗೆ ಹೇಳಿದ್ದಾರೆ.

ನಮಗೂ ನಮ್ಮೂರಿನ ಲೋಹಿತ್ ಎಂಬುವನಿಗೂ ಜಮೀನು ದಾರಿ ವಿಚಾರವಾಗಿ ಆಗಾಗ ಗಲಾಟೆಯಾಗಿದ್ದು, ನಿನಗೆ ಮತ್ತು ನಿಮ್ಮ ಕುಟುಂಬಕ್ಕೆ ಒಂದು ಗತಿ ಕಾಣಿಸುತ್ತೇನೆ ನೋಡು, ಒಂದಲ್ಲ ಒಂದು ದಿನ ನಿಮ್ಮನ್ನು ಕೊಲೆ ಮಾಡದೇ ಬಿಡುವುದಿಲ್ಲವೆಂದು ಪದೇ ಪದೇ ಹೇಳುತ್ತಿದ್ದನು. ಈ ದ್ವೇಷದಿಂದ ನನ್ನ ಮಗಳ ಮತ್ತು ನಮ್ಮ ಕುಟುಂಬದ ಮಾನಮರ್ಯಾದೆಯನ್ನು ಬೀದಿ ಪಾಲು ಮಾಡುವ ಉದ್ದೇಶದಿಂದ ನನ್ನ ಮಗಳೊಂದಿಗೆ ತೋಡಗಿದ ವಿಡಿಯೋವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು ಎಲ್ಲರಿಗೂ ವಾಟ್ಸಾಪ್‌ನಲ್ಲಿ ಕಳುಹಿಸಿ, ನನ್ನ ಮಗಳ ಮತ್ತು ನಮ್ಮ ಸಂಸಾರವನ್ನು ಹಾಳು ಮಾಡಿರುತ್ತಾನೆ. ಆದ್ದರಿಂದ ಲೋಹಿತ್ ಅಲಿಯಾಸ್ ರಾಜಿ ಎಂಬುವನ ಮೇಲೆ ಕಾನೂನು ಕ್ರಮ ಜರುಗಿಸಿ ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ಕೊಡಿಸುವಂತೆ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

5 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

6 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

7 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

8 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

13 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

15 hours ago