ಮೈಸೂರು

ವಿವಾಹಿತ ಪುತ್ರಿಯ ಅಶ್ಲೀಲ ವಿಡಿಯೋ ವೈರಲ್‌ : ಕೈ ಮುಖಂಡನ ವಿರುದ್ಧ ತಂದೆ ದೂರು

ಮೈಸೂರು : ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ನಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?
ಅ. 16ರಂದು ರಾತ್ರಿ 9:20 ಗಂಟೆಗೆ ಸೋಮೇಗೌಡ ಬಿನ್ ಲೇಟ್ ಮಲೆಗೌಡ ಎಂಬುವರ ದೂರಿನ ಸಾರಾಂಶವೆನೆಂದರೆ, ನಾನು ವ್ಯವಸಾಯ ಕಸುಬನ್ನು ಮಾಡಿಕೊಂಡಿರುತ್ತೇನೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಮೂರು ತಿಂಗಳ ಹಿಂದೆ ಹೊಳೆನರಸೀಪುರ ತಾಲೂಕಿನ ಮರಹಳ್ಳಿ ಗ್ರಾಮದ ವ್ಯಕ್ತಿ ಜೊತೆಗೆ ಮಗಳ ಮದುವೆ ಮಾಡಿರುತ್ತೇನೆ. ನನ್ನ ಮಗಳು ಮತ್ತು ಅಳಿಯ ಅನ್ಯೋನ್ಯವಾಗಿದ್ದರು.

ದೀಪಾವಳಿ ಹಬ್ಬದ ಹಿನ್ನೆಲೆ ನನ್ನ ಮಗಳು ನಮ್ಮ ಮನೆಗೆ ಬಂದಿದ್ದಳು. ಹೀಗಿರುವಾಗ ಅ.16ರಂದು ಬೆಳಿಗ್ಗೆ 10 ಗಂಟೆಗೆ ನನ್ನ ಸಂಬಂಧಿಕರು ನಮ್ಮ ಜಮೀನಿನ ಬಳಿ ಸಿಕ್ಕು, ನಿಮ್ಮ ಮಗಳು ಮತ್ತು ನಿಮ್ಮೂರಿನ ಲೋಹಿತ್ ಅಲಿಯಾಸ್ ರಾಜಿ ಇಬ್ಬರ ಅಶ್ಲೀಲ ವಿಡಿಯೋ ಮಲ್ಲಿಕಾರ್ಜುನ ಎಂಬುವವರ ವಾಟ್ಸಾಪ್ ನಂಬರ್‌ಗೆ ಬಂದಿದ್ದು, ಆತನು ನನ್ನ ವಾಟ್ಸಾಪ್ ನಂಬರ್‌ಗೆ ಕಳುಹಿಸಿದ್ದು, ಏನೆಂದು ವಿಡಿಯೋ ನೋಡಲಾಗಿ ಅದು ನಿಮ್ಮ ಮಗಳ ಮತ್ತು ಲೋಹಿತ್ ಅಶ್ಲೀಲ ವಿಡಿಯೋ ಆಗಿತ್ತು. ಬಳಿಕ ಡಿಲೀಟ್ ಮಾಡಿರುವುದಾಗಿ ನನಗೆ ಹೇಳಿದ್ದಾರೆ.

ನಮಗೂ ನಮ್ಮೂರಿನ ಲೋಹಿತ್ ಎಂಬುವನಿಗೂ ಜಮೀನು ದಾರಿ ವಿಚಾರವಾಗಿ ಆಗಾಗ ಗಲಾಟೆಯಾಗಿದ್ದು, ನಿನಗೆ ಮತ್ತು ನಿಮ್ಮ ಕುಟುಂಬಕ್ಕೆ ಒಂದು ಗತಿ ಕಾಣಿಸುತ್ತೇನೆ ನೋಡು, ಒಂದಲ್ಲ ಒಂದು ದಿನ ನಿಮ್ಮನ್ನು ಕೊಲೆ ಮಾಡದೇ ಬಿಡುವುದಿಲ್ಲವೆಂದು ಪದೇ ಪದೇ ಹೇಳುತ್ತಿದ್ದನು. ಈ ದ್ವೇಷದಿಂದ ನನ್ನ ಮಗಳ ಮತ್ತು ನಮ್ಮ ಕುಟುಂಬದ ಮಾನಮರ್ಯಾದೆಯನ್ನು ಬೀದಿ ಪಾಲು ಮಾಡುವ ಉದ್ದೇಶದಿಂದ ನನ್ನ ಮಗಳೊಂದಿಗೆ ತೋಡಗಿದ ವಿಡಿಯೋವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು ಎಲ್ಲರಿಗೂ ವಾಟ್ಸಾಪ್‌ನಲ್ಲಿ ಕಳುಹಿಸಿ, ನನ್ನ ಮಗಳ ಮತ್ತು ನಮ್ಮ ಸಂಸಾರವನ್ನು ಹಾಳು ಮಾಡಿರುತ್ತಾನೆ. ಆದ್ದರಿಂದ ಲೋಹಿತ್ ಅಲಿಯಾಸ್ ರಾಜಿ ಎಂಬುವನ ಮೇಲೆ ಕಾನೂನು ಕ್ರಮ ಜರುಗಿಸಿ ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ಕೊಡಿಸುವಂತೆ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

11 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

11 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

11 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

11 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

11 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago