ಮೈಸೂರು: ಮೈಸೂರು-ಕೊಡಗು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಪ್ರತಾಪ್ ಸಿಂಹ ಬದಲಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಚರ್ಚೆ ಮುನ್ನಲೆಗೆ ಬರುತ್ತಿದ್ದಂತೆ ರಾಜ ವಂಶಸ್ಥ ಯದುವೀರ್ ವಿರುದ್ಧ ಪೋಸ್ಟರ್ ಅಭಿಯಾನ ಶುರುವಾಗಿದೆ.
ರಾಜರಾಗಿರುವ ನೀವು ರಾಜರಾಗಿಯೇ ಇರಿ ಮಂತ್ರಿಯಾಗಬೇಡಿ ಎಂದು ಮನವಿ ಮಾಡಿದ್ದಾರೆ. ಯದು ರಾಜರೇ ನಿಮಗೆ ನಿಮ್ಮದೇ ಆದ ಘನತೆಯಿದೆ. ಅದನ್ನು ಮರೆತು ರಾಜಕೀಯಕ್ಕೆ ಬರಬೇಡಿ ಎಂದು ಯದುವೀರ್ ಅವರ ರಾಜಕೀಯ ಪ್ರವೇಶಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದೆ.
ಮತ್ತೊಂದೆಡೆ ಸಂಸದ ಪ್ರತಾಪ್ ಸಿಂಹ ರಾಜರು ರಾಜಕೀಯಕ್ಕೆ ಬಂದರೆ ಸ್ವಾಗತಿಸುವುದಾಗಿ ಹೇಳಿದ್ದಾರೆ. ಇತ್ತ ರಾಜವಂಶಸ್ಥ ಯದುವೀರ್ ಮಾತ್ರ ಯಾವುದಕ್ಕೂ ಪ್ರತಿಕ್ರಿಯೆ ನೀಡದೇ ಇರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಯದುವೀರ್ ಮುಂದಿನ ನಡೆ ಬಗ್ಗೆ ಎಲ್ಲರೂ ಕಾಯುತ್ತಿದ್ದಾರೆ.
ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…
ನವದೆಹಲಿ : ಸ್ಲೀಪರ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…