ಮೈಸೂರು

ಅವಧಿ ಮೀರಿ ಬಿಲ್‌ ಬಾಕಿ ಇದ್ದರೆ ವಿದ್ಯುತ್‌ ಕಡಿತ: ಸೆಸ್ಕ್‌

ಬಾಕಿ ಪಾವತಿಗೆ 3 ದಿನಗಳ ಗಡುವು

ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಸೆಸ್ಕ್‌ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿ ಮಾಡದಿದ್ದಲ್ಲಿ, ಅಂತಹ ಸ್ಥಾವರಗಳಿಗೆ ವಿದ್ಯುತ್ ಕಡಿತಗೊಳಿಸಲು ತೀರ್ಮಾನಿಸಿದೆ.

ಕೆಲವು ಗ್ರಾಹಕರು, ಗ್ರಾಮ ಪಂಚಾಯತಿ ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳನ್ನು ಒಳಗೊಂಡಂತೆ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್‌ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ವಿದ್ಯುತ್ ಕಡಿತಗೊಳಿಸಲು ಸೆಸ್ಕ್‌ ನಿರ್ಧರಿಸಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ ವಿದ್ಯುತ್ ಸರಬರಾಜಿನ, ವಿತರಣಾ ಲೈಸೆನ್ಸ್‌ದಾರರ ಷರತ್ತುಗಳು 2004 ಅನುಬಂಧ-04ರ ನಿಯಮ 4.18(ಜೆ) ಪ್ರಕಾರ “ಗ್ರಾಹಕರು ಬಿಲ್‌ ಪಾವತಿಗೆ ನೀಡಿರುವ ದಿನಾಂಕದೊಳಗೆ ಬಿಲ್‌ ಪಾವತಿಸದಿದ್ದರೆ, ನಿಗದಿತ ಗಡುವಿನ ದಿನಾಂಕದ ನಂತರ ಶುಲ್ಕ ಪಾವತಿಸದ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ನೀಡಿ, ಬಾಕಿ ಪಾವತಿಸದ ಕಾರಣಕ್ಕೆ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಲೈಸೆನ್ಸ್‌ದಾರರು ಹೊಂದಿರುತ್ತಾರೆ”. ಅಲ್ಲದೇ ನಿಯಮ 2.11ರ ಪ್ರಕಾರ “ಬಿಲ್‌ ವಿತರಿಸಿದ ಬಳಿಕ 15 ದಿನಗಳ ಅವಧಿ ಬಿಲ್‌ ಪಾವತಿಗೆ ಅಂತಿಮ ಗಡುವಾಗಿರುತ್ತದೆ.” “ಗ್ರಾಹಕರಿಗೆ ನೀಡುವ ಬಿಲ್‌ನ ಹಿಂಬದಿಯ ಸೂಚನೆ 1ರಲ್ಲಿ ನಿಗದಿತ ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಈ ಬಿಲ್‌ ಅನ್ನೇ ವಿದ್ಯುತ್‌ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸಬೇಕು ಎಂದು ನಮೂದಿಸಲಾಗಿದೆ ಹಾಗೂ ಹಿಂದಿನ ಬಾಕಿಗೆ ವಾಯ್ದೆ ದಿನಾಂಕ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ತುರ್ತು ಸೇವೆಗಳಾದ ಸರ್ಕಾರಿ ಆಸ್ಪತ್ರೆಗಳು, ಕುಡಿಯುವ ನೀರು, ಬೀದಿ ದೀಪಗಳ ಸೇವೆಗಳನ್ನು ಹೊರತುಪಡಿಸಿ ಎಲ್ಲ ಪ್ರವರ್ಗದ ವಿದ್ಯುತ್‌ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ತಮ್ಮ ಸ್ಥಾವರಗಳ ವಿದ್ಯುತ್‌ ಶುಲ್ಕ ಬಾಕಿಯನ್ನು 3 ದಿನದೊಳಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಅಧಿಕೃತ ನಗದು ಕೌಂಟರ್, ಆನ್‌ ಲೈನ್‌ ಮೂಲಕ ಪಾವತಿಸುವಂತೆ ಕೋರಲಾಗಿದೆ. ಅಲ್ಲದೇ ನಿಗದಿತ ದಿನದೊಳಗೆ ವಿದ್ಯುತ್‌ ಶುಲ್ಕ ಬಾಕಿ ಪಾವತಿಸದಿದ್ದಲ್ಲಿ ಡಿಸೆಂಬರ್‌ 9, 2024ರ ಸೋಮವಾರ ಸಾಮೂಹಿಕವಾಗಿ ವಿದ್ಯುತ್ ಕಡಿತಗೊಳಿಸುವ ಅಭಿಯಾನದ ಮೂಲಕ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಸ್ಥಾವರಗಳಿಗೆ ನಿಯಮಾನುಸಾರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಆದ್ದರಿಂದ ವಿದ್ಯುತ್‌‌ ಶುಲ್ಕ ಬಾಕಿ ಉಳಿಸಿಕೊಂಡಿರುವ ಗ್ರಾಹಕರು, ಸರ್ಕಾರಿ ಇಲಾಖೆಗಳು ತುರ್ತಾಗಿ ತಮ್ಮ ವಿದ್ಯುತ್‌ ಸ್ಥಾವರದ ಬಾಕಿ ಪಾವತಿಸಿ ಇಲಾಖೆಯೊಂದಿಗೆ ಸಹಕರಿಸಬೇಕಿದೆ.
– ಜಿ. ಶೀಲಾ, ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

2 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

6 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

6 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

7 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

7 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

7 hours ago