ಮೈಸೂರು

ಅವಧಿ ಮೀರಿ ಬಿಲ್‌ ಬಾಕಿ ಇದ್ದರೆ ವಿದ್ಯುತ್‌ ಕಡಿತ: ಸೆಸ್ಕ್‌

ಬಾಕಿ ಪಾವತಿಗೆ 3 ದಿನಗಳ ಗಡುವು

ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಸೆಸ್ಕ್‌ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿ ಮಾಡದಿದ್ದಲ್ಲಿ, ಅಂತಹ ಸ್ಥಾವರಗಳಿಗೆ ವಿದ್ಯುತ್ ಕಡಿತಗೊಳಿಸಲು ತೀರ್ಮಾನಿಸಿದೆ.

ಕೆಲವು ಗ್ರಾಹಕರು, ಗ್ರಾಮ ಪಂಚಾಯತಿ ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳನ್ನು ಒಳಗೊಂಡಂತೆ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್‌ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ವಿದ್ಯುತ್ ಕಡಿತಗೊಳಿಸಲು ಸೆಸ್ಕ್‌ ನಿರ್ಧರಿಸಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ ವಿದ್ಯುತ್ ಸರಬರಾಜಿನ, ವಿತರಣಾ ಲೈಸೆನ್ಸ್‌ದಾರರ ಷರತ್ತುಗಳು 2004 ಅನುಬಂಧ-04ರ ನಿಯಮ 4.18(ಜೆ) ಪ್ರಕಾರ “ಗ್ರಾಹಕರು ಬಿಲ್‌ ಪಾವತಿಗೆ ನೀಡಿರುವ ದಿನಾಂಕದೊಳಗೆ ಬಿಲ್‌ ಪಾವತಿಸದಿದ್ದರೆ, ನಿಗದಿತ ಗಡುವಿನ ದಿನಾಂಕದ ನಂತರ ಶುಲ್ಕ ಪಾವತಿಸದ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ನೀಡಿ, ಬಾಕಿ ಪಾವತಿಸದ ಕಾರಣಕ್ಕೆ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಲೈಸೆನ್ಸ್‌ದಾರರು ಹೊಂದಿರುತ್ತಾರೆ”. ಅಲ್ಲದೇ ನಿಯಮ 2.11ರ ಪ್ರಕಾರ “ಬಿಲ್‌ ವಿತರಿಸಿದ ಬಳಿಕ 15 ದಿನಗಳ ಅವಧಿ ಬಿಲ್‌ ಪಾವತಿಗೆ ಅಂತಿಮ ಗಡುವಾಗಿರುತ್ತದೆ.” “ಗ್ರಾಹಕರಿಗೆ ನೀಡುವ ಬಿಲ್‌ನ ಹಿಂಬದಿಯ ಸೂಚನೆ 1ರಲ್ಲಿ ನಿಗದಿತ ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಈ ಬಿಲ್‌ ಅನ್ನೇ ವಿದ್ಯುತ್‌ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸಬೇಕು ಎಂದು ನಮೂದಿಸಲಾಗಿದೆ ಹಾಗೂ ಹಿಂದಿನ ಬಾಕಿಗೆ ವಾಯ್ದೆ ದಿನಾಂಕ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ತುರ್ತು ಸೇವೆಗಳಾದ ಸರ್ಕಾರಿ ಆಸ್ಪತ್ರೆಗಳು, ಕುಡಿಯುವ ನೀರು, ಬೀದಿ ದೀಪಗಳ ಸೇವೆಗಳನ್ನು ಹೊರತುಪಡಿಸಿ ಎಲ್ಲ ಪ್ರವರ್ಗದ ವಿದ್ಯುತ್‌ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ತಮ್ಮ ಸ್ಥಾವರಗಳ ವಿದ್ಯುತ್‌ ಶುಲ್ಕ ಬಾಕಿಯನ್ನು 3 ದಿನದೊಳಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಅಧಿಕೃತ ನಗದು ಕೌಂಟರ್, ಆನ್‌ ಲೈನ್‌ ಮೂಲಕ ಪಾವತಿಸುವಂತೆ ಕೋರಲಾಗಿದೆ. ಅಲ್ಲದೇ ನಿಗದಿತ ದಿನದೊಳಗೆ ವಿದ್ಯುತ್‌ ಶುಲ್ಕ ಬಾಕಿ ಪಾವತಿಸದಿದ್ದಲ್ಲಿ ಡಿಸೆಂಬರ್‌ 9, 2024ರ ಸೋಮವಾರ ಸಾಮೂಹಿಕವಾಗಿ ವಿದ್ಯುತ್ ಕಡಿತಗೊಳಿಸುವ ಅಭಿಯಾನದ ಮೂಲಕ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಸ್ಥಾವರಗಳಿಗೆ ನಿಯಮಾನುಸಾರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಆದ್ದರಿಂದ ವಿದ್ಯುತ್‌‌ ಶುಲ್ಕ ಬಾಕಿ ಉಳಿಸಿಕೊಂಡಿರುವ ಗ್ರಾಹಕರು, ಸರ್ಕಾರಿ ಇಲಾಖೆಗಳು ತುರ್ತಾಗಿ ತಮ್ಮ ವಿದ್ಯುತ್‌ ಸ್ಥಾವರದ ಬಾಕಿ ಪಾವತಿಸಿ ಇಲಾಖೆಯೊಂದಿಗೆ ಸಹಕರಿಸಬೇಕಿದೆ.
– ಜಿ. ಶೀಲಾ, ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

9 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

10 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

11 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

11 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

11 hours ago