ಮೈಸೂರು

ಅವಧಿ ಮೀರಿ ಬಿಲ್‌ ಬಾಕಿ ಇದ್ದರೆ ವಿದ್ಯುತ್‌ ಕಡಿತ: ಸೆಸ್ಕ್‌

ಬಾಕಿ ಪಾವತಿಗೆ 3 ದಿನಗಳ ಗಡುವು

ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಸೆಸ್ಕ್‌ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿ ಮಾಡದಿದ್ದಲ್ಲಿ, ಅಂತಹ ಸ್ಥಾವರಗಳಿಗೆ ವಿದ್ಯುತ್ ಕಡಿತಗೊಳಿಸಲು ತೀರ್ಮಾನಿಸಿದೆ.

ಕೆಲವು ಗ್ರಾಹಕರು, ಗ್ರಾಮ ಪಂಚಾಯತಿ ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳನ್ನು ಒಳಗೊಂಡಂತೆ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್‌ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ವಿದ್ಯುತ್ ಕಡಿತಗೊಳಿಸಲು ಸೆಸ್ಕ್‌ ನಿರ್ಧರಿಸಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ ವಿದ್ಯುತ್ ಸರಬರಾಜಿನ, ವಿತರಣಾ ಲೈಸೆನ್ಸ್‌ದಾರರ ಷರತ್ತುಗಳು 2004 ಅನುಬಂಧ-04ರ ನಿಯಮ 4.18(ಜೆ) ಪ್ರಕಾರ “ಗ್ರಾಹಕರು ಬಿಲ್‌ ಪಾವತಿಗೆ ನೀಡಿರುವ ದಿನಾಂಕದೊಳಗೆ ಬಿಲ್‌ ಪಾವತಿಸದಿದ್ದರೆ, ನಿಗದಿತ ಗಡುವಿನ ದಿನಾಂಕದ ನಂತರ ಶುಲ್ಕ ಪಾವತಿಸದ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ನೀಡಿ, ಬಾಕಿ ಪಾವತಿಸದ ಕಾರಣಕ್ಕೆ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಲೈಸೆನ್ಸ್‌ದಾರರು ಹೊಂದಿರುತ್ತಾರೆ”. ಅಲ್ಲದೇ ನಿಯಮ 2.11ರ ಪ್ರಕಾರ “ಬಿಲ್‌ ವಿತರಿಸಿದ ಬಳಿಕ 15 ದಿನಗಳ ಅವಧಿ ಬಿಲ್‌ ಪಾವತಿಗೆ ಅಂತಿಮ ಗಡುವಾಗಿರುತ್ತದೆ.” “ಗ್ರಾಹಕರಿಗೆ ನೀಡುವ ಬಿಲ್‌ನ ಹಿಂಬದಿಯ ಸೂಚನೆ 1ರಲ್ಲಿ ನಿಗದಿತ ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಈ ಬಿಲ್‌ ಅನ್ನೇ ವಿದ್ಯುತ್‌ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸಬೇಕು ಎಂದು ನಮೂದಿಸಲಾಗಿದೆ ಹಾಗೂ ಹಿಂದಿನ ಬಾಕಿಗೆ ವಾಯ್ದೆ ದಿನಾಂಕ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ತುರ್ತು ಸೇವೆಗಳಾದ ಸರ್ಕಾರಿ ಆಸ್ಪತ್ರೆಗಳು, ಕುಡಿಯುವ ನೀರು, ಬೀದಿ ದೀಪಗಳ ಸೇವೆಗಳನ್ನು ಹೊರತುಪಡಿಸಿ ಎಲ್ಲ ಪ್ರವರ್ಗದ ವಿದ್ಯುತ್‌ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ತಮ್ಮ ಸ್ಥಾವರಗಳ ವಿದ್ಯುತ್‌ ಶುಲ್ಕ ಬಾಕಿಯನ್ನು 3 ದಿನದೊಳಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಅಧಿಕೃತ ನಗದು ಕೌಂಟರ್, ಆನ್‌ ಲೈನ್‌ ಮೂಲಕ ಪಾವತಿಸುವಂತೆ ಕೋರಲಾಗಿದೆ. ಅಲ್ಲದೇ ನಿಗದಿತ ದಿನದೊಳಗೆ ವಿದ್ಯುತ್‌ ಶುಲ್ಕ ಬಾಕಿ ಪಾವತಿಸದಿದ್ದಲ್ಲಿ ಡಿಸೆಂಬರ್‌ 9, 2024ರ ಸೋಮವಾರ ಸಾಮೂಹಿಕವಾಗಿ ವಿದ್ಯುತ್ ಕಡಿತಗೊಳಿಸುವ ಅಭಿಯಾನದ ಮೂಲಕ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಸ್ಥಾವರಗಳಿಗೆ ನಿಯಮಾನುಸಾರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಆದ್ದರಿಂದ ವಿದ್ಯುತ್‌‌ ಶುಲ್ಕ ಬಾಕಿ ಉಳಿಸಿಕೊಂಡಿರುವ ಗ್ರಾಹಕರು, ಸರ್ಕಾರಿ ಇಲಾಖೆಗಳು ತುರ್ತಾಗಿ ತಮ್ಮ ವಿದ್ಯುತ್‌ ಸ್ಥಾವರದ ಬಾಕಿ ಪಾವತಿಸಿ ಇಲಾಖೆಯೊಂದಿಗೆ ಸಹಕರಿಸಬೇಕಿದೆ.
– ಜಿ. ಶೀಲಾ, ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago