ಮೈಸೂರು

Power cut: ಜೂ.30 ರಂದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್‌ ಇರಲ್ಲ

ಮೈಸೂರು: ನಗರದ ಹಲವೆಡೆ ವಿದ್ಯುತ್‌ ಕಾರ್ಯನಿರ್ವಹಣಾ ಕಾರ್ಯಾ ಕೈಗೊಂಡಿರುವುದರಿಂದ ಜೂನ್‌ 30 ರ ಬೆಳಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸುವಂತೆ ಚೆಸ್ಕಾಂ ತಿಳಿಸಿದೆ.

ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ?
ರಾಮಾನುಜ ರಸ್ತೆ 01 ರಿಂದ 09ನೇ ಕ್ರಾಸ್ ವರೆಗೆ, ಹೊಸಬಂಡಿಕೇರಿ, ಜೆ.ಎಸ್.ಎಸ್. ಆಸ್ಪತ್ರೆ, ಅಗ್ರಹಾರ, ಬಸವೇಶ್ವರ ರಸ್ತೆ, ಚಾಮುಂಡಿಪುರoನ ಹಲವು ಭಾಗಗಳು, ತ್ಯಾಗರಾಜ ರಸ್ತೆ, ಚಾಮುಂಡಿಬೆಟ್ಟ ಮತ್ತು ಪಾದ, ಗುಂಡುರಾವ್ ನಗರ, ದತ್ತನಗರ, ಮುನೇಶ್ವರನಗರ, ಗೌರಿಶಂಕರನಗರ.

ಇಲ್ಲೂ ವಿದ್ಯುತ್‌ ಇರಲ್ಲ..
ನಂಜನಗೂಡು ಟೋಲ್ ಗೇಟ್, ತಾವರೆಕೆರೆ, ಜಾಕಿ ಕ್ವಾಟ್ರಸ್, ರೇಸ್ ಕೋರ್ಸ್ ಹಿಂಭಾಗ, ಸಬರ್ಬ್ ಬಸ್ ನಿಲ್ದಾಣ, ನಜರ್‌ಬಾದ್, ಇಟ್ಟಿಗೆಗೂಡು, ಮೃಗಾಲಯದ ಸುತ್ತ-ಮುತ್ತ, ಸರ್ಕಾರಿ ಅಥಿತಿ ಗೃಹ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.

ಮುಂದುವರೆದು ತಾಲ್ಲೂಕು ಕಛೇರಿ, ಡಿ. ದೇವರಾಜ ಅರಸು ರಸ್ತೆ, ಬಿ.ಎನ್. ರಸ್ತೆ, ಚಾಮುಂಡಿಬೆಟ್ಟ, ಸಿದ್ದಾರ್ಥನಗರ, ಕುರುಬಾರಹಳ್ಳಿ, ಜೆ.ಸಿ. ನಗರ, ಕೆ.ಸಿ ನಗರ, ಜೆ.ಎಸ್.ಎಸ್ ಆಯುರ್ವೇದಿಕ್ ಸುತ್ತ-ಮುತ್ತ, ಅರಮನೆ ಸುತ್ತ-ಮುತ್ತಲಿನ ಪ್ರದೇಶಗಳು ಹಾಗೂ ಶ್ರೀ ಹರ್ಷ ರಸ್ತೆ, ಸಯ್ಯಾಜೀರಾವ್ ರಸ್ತೆ, ಇರ್ವೀನ್ ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳು, ಧನ್ವಂತರಿ ರಸ್ತೆ ಹಾಗೂ ಶಿವರಾಂಪೇಟೆ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಮತ್ತು ಕೈಗಾರಿಕೋಧ್ಯಮಿಗಳು ಸಹಕರಿಸಬೇಕು ಎಂದು ಚಾ.ವಿ.ಸ.ನಿ.ನಿ.ಯ ನ.ರಾ.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago