ಮೈಸೂರು: ನಗರದ ಹಲವೆಡೆ ವಿದ್ಯುತ್ ಕಾರ್ಯನಿರ್ವಹಣಾ ಕಾರ್ಯಾ ಕೈಗೊಂಡಿರುವುದರಿಂದ ಜೂನ್ 30 ರ ಬೆಳಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸುವಂತೆ ಚೆಸ್ಕಾಂ ತಿಳಿಸಿದೆ.
ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ರಾಮಾನುಜ ರಸ್ತೆ 01 ರಿಂದ 09ನೇ ಕ್ರಾಸ್ ವರೆಗೆ, ಹೊಸಬಂಡಿಕೇರಿ, ಜೆ.ಎಸ್.ಎಸ್. ಆಸ್ಪತ್ರೆ, ಅಗ್ರಹಾರ, ಬಸವೇಶ್ವರ ರಸ್ತೆ, ಚಾಮುಂಡಿಪುರoನ ಹಲವು ಭಾಗಗಳು, ತ್ಯಾಗರಾಜ ರಸ್ತೆ, ಚಾಮುಂಡಿಬೆಟ್ಟ ಮತ್ತು ಪಾದ, ಗುಂಡುರಾವ್ ನಗರ, ದತ್ತನಗರ, ಮುನೇಶ್ವರನಗರ, ಗೌರಿಶಂಕರನಗರ.
ಇಲ್ಲೂ ವಿದ್ಯುತ್ ಇರಲ್ಲ..
ನಂಜನಗೂಡು ಟೋಲ್ ಗೇಟ್, ತಾವರೆಕೆರೆ, ಜಾಕಿ ಕ್ವಾಟ್ರಸ್, ರೇಸ್ ಕೋರ್ಸ್ ಹಿಂಭಾಗ, ಸಬರ್ಬ್ ಬಸ್ ನಿಲ್ದಾಣ, ನಜರ್ಬಾದ್, ಇಟ್ಟಿಗೆಗೂಡು, ಮೃಗಾಲಯದ ಸುತ್ತ-ಮುತ್ತ, ಸರ್ಕಾರಿ ಅಥಿತಿ ಗೃಹ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.
ಮುಂದುವರೆದು ತಾಲ್ಲೂಕು ಕಛೇರಿ, ಡಿ. ದೇವರಾಜ ಅರಸು ರಸ್ತೆ, ಬಿ.ಎನ್. ರಸ್ತೆ, ಚಾಮುಂಡಿಬೆಟ್ಟ, ಸಿದ್ದಾರ್ಥನಗರ, ಕುರುಬಾರಹಳ್ಳಿ, ಜೆ.ಸಿ. ನಗರ, ಕೆ.ಸಿ ನಗರ, ಜೆ.ಎಸ್.ಎಸ್ ಆಯುರ್ವೇದಿಕ್ ಸುತ್ತ-ಮುತ್ತ, ಅರಮನೆ ಸುತ್ತ-ಮುತ್ತಲಿನ ಪ್ರದೇಶಗಳು ಹಾಗೂ ಶ್ರೀ ಹರ್ಷ ರಸ್ತೆ, ಸಯ್ಯಾಜೀರಾವ್ ರಸ್ತೆ, ಇರ್ವೀನ್ ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳು, ಧನ್ವಂತರಿ ರಸ್ತೆ ಹಾಗೂ ಶಿವರಾಂಪೇಟೆ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಮತ್ತು ಕೈಗಾರಿಕೋಧ್ಯಮಿಗಳು ಸಹಕರಿಸಬೇಕು ಎಂದು ಚಾ.ವಿ.ಸ.ನಿ.ನಿ.ಯ ನ.ರಾ.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…