ಮೈಸೂರು

Power cut: ಜೂ.30 ರಂದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್‌ ಇರಲ್ಲ

ಮೈಸೂರು: ನಗರದ ಹಲವೆಡೆ ವಿದ್ಯುತ್‌ ಕಾರ್ಯನಿರ್ವಹಣಾ ಕಾರ್ಯಾ ಕೈಗೊಂಡಿರುವುದರಿಂದ ಜೂನ್‌ 30 ರ ಬೆಳಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸುವಂತೆ ಚೆಸ್ಕಾಂ ತಿಳಿಸಿದೆ.

ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ?
ರಾಮಾನುಜ ರಸ್ತೆ 01 ರಿಂದ 09ನೇ ಕ್ರಾಸ್ ವರೆಗೆ, ಹೊಸಬಂಡಿಕೇರಿ, ಜೆ.ಎಸ್.ಎಸ್. ಆಸ್ಪತ್ರೆ, ಅಗ್ರಹಾರ, ಬಸವೇಶ್ವರ ರಸ್ತೆ, ಚಾಮುಂಡಿಪುರoನ ಹಲವು ಭಾಗಗಳು, ತ್ಯಾಗರಾಜ ರಸ್ತೆ, ಚಾಮುಂಡಿಬೆಟ್ಟ ಮತ್ತು ಪಾದ, ಗುಂಡುರಾವ್ ನಗರ, ದತ್ತನಗರ, ಮುನೇಶ್ವರನಗರ, ಗೌರಿಶಂಕರನಗರ.

ಇಲ್ಲೂ ವಿದ್ಯುತ್‌ ಇರಲ್ಲ..
ನಂಜನಗೂಡು ಟೋಲ್ ಗೇಟ್, ತಾವರೆಕೆರೆ, ಜಾಕಿ ಕ್ವಾಟ್ರಸ್, ರೇಸ್ ಕೋರ್ಸ್ ಹಿಂಭಾಗ, ಸಬರ್ಬ್ ಬಸ್ ನಿಲ್ದಾಣ, ನಜರ್‌ಬಾದ್, ಇಟ್ಟಿಗೆಗೂಡು, ಮೃಗಾಲಯದ ಸುತ್ತ-ಮುತ್ತ, ಸರ್ಕಾರಿ ಅಥಿತಿ ಗೃಹ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.

ಮುಂದುವರೆದು ತಾಲ್ಲೂಕು ಕಛೇರಿ, ಡಿ. ದೇವರಾಜ ಅರಸು ರಸ್ತೆ, ಬಿ.ಎನ್. ರಸ್ತೆ, ಚಾಮುಂಡಿಬೆಟ್ಟ, ಸಿದ್ದಾರ್ಥನಗರ, ಕುರುಬಾರಹಳ್ಳಿ, ಜೆ.ಸಿ. ನಗರ, ಕೆ.ಸಿ ನಗರ, ಜೆ.ಎಸ್.ಎಸ್ ಆಯುರ್ವೇದಿಕ್ ಸುತ್ತ-ಮುತ್ತ, ಅರಮನೆ ಸುತ್ತ-ಮುತ್ತಲಿನ ಪ್ರದೇಶಗಳು ಹಾಗೂ ಶ್ರೀ ಹರ್ಷ ರಸ್ತೆ, ಸಯ್ಯಾಜೀರಾವ್ ರಸ್ತೆ, ಇರ್ವೀನ್ ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳು, ಧನ್ವಂತರಿ ರಸ್ತೆ ಹಾಗೂ ಶಿವರಾಂಪೇಟೆ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಮತ್ತು ಕೈಗಾರಿಕೋಧ್ಯಮಿಗಳು ಸಹಕರಿಸಬೇಕು ಎಂದು ಚಾ.ವಿ.ಸ.ನಿ.ನಿ.ಯ ನ.ರಾ.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

3 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

4 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

4 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

5 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

6 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

10 hours ago