ಮೈಸೂರು

ಮೈಸೂರಿನ ಈ ಪ್ರದೇಶಗಳಲ್ಲಿ ಮೇ.21 ರಂದು ವಿದ್ಯುತ್ ವ್ಯತ್ಯಯ

ಮೈಸೂರು:   ಮೇ 21 ರಂದು  ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 10 ರಿಂದ ಸಂಜೆ 05:30 ಗಂಟೆಯವರೆಗೆ   ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು :ಇಂಡಸ್ಟ್ರಿಯಲ್ ಸಬರ್ಬ್, ವಿದ್ಯಾರಣ್ಯಪುರಂ 25, 26, 27, 28, 29 ಮತ್ತು 30ನೇ ಕ್ರಾಸ್, ಕನಕಗಿರಿ, ಬೆಸ್ತರ ಬ್ಲಾಕ್, ಇಂಡಸ್ಟ್ರಿಯಲ್ ಸಬರ್ಬ್ 1, 2 ಮತ್ತು 3ನೇ ಹಂತ, ಸ್ಟರ್ಲಿಂಗ್ ಸುತ್ತ-ಮುತ್ತ ವಿವರ್ಸ್ ಕಾಲೋನಿ, ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಸುತ್ತ-ಮುತ್ತ, ಚಾಮುಂಡಿಪುರo ವೃತ್ತ, ಪೋಸ್ಟಲ್ ಕಾಲೋನಿ, ಚಾಮುಂಡಿವನ, ವಾನಿ ವಿದ್ಯಾಮಂದಿರ ಸುತ್ತ-ಮುತ್ತ, ಸಿಲ್ಕ್ ಫ್ಯಾಕ್ಟರಿ ಸುತ್ತ-ಮುತ್ತ, ಅಶೋಕಪುರಂ, ನಾರಾಯಣ ಶಾಸ್ತ್ರಿ ರಸ್ತೆ, ಆಜಾಮ್ ಮಸೀದಿ ರಸ್ತೆ, ದಿವಾನ್ಸ್ ರಸ್ತೆ, ಬಲ್ಲಾಳ್ ರಸ್ತೆ, ಕೃಷ್ಣಮೂರ್ತಿಪುರಂ, ಆರ್.ಟಿ.ಓ ರಸ್ತೆ, ಚಾಮರಾಜಪುರಂ, ನಂಜುಮಳಿಗೆ ಸುತ್ತ-ಮುತ್ತಲಿನ ಪ್ರದೇಶಗಳು, ಬಂಡಿಪಾಳ್ಯ, ಹೊಸಹುಂಡಿ, ಗುಡುಮಾದನಹಳ್ಳಿ, ಉತ್ತನಹಳ್ಳಿ, ಏಳಿಗೆಹುಂಡಿ, ಹಾಲನಹಳ್ಳಿ ರಿಂಗ್ ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳು, ನಾಚನಹಳ್ಳಿ ಪಾಳ್ಯ, ಜೆ.ಪಿ A.B.C.D ಬ್ಲಾಕ್, ಕವಿತಾ ಬೇಕರಿ ವೃತ್ತ, ಪೊಲೀಸ್ ಬೂತ್ ವೃತ್ತ, ಗೊಬ್ಬಳಿ ಮರ ವೃತ್ತ, ಸಿದ್ದಲಿಂಗೇಶ್ವರ ಬಡಾವಣೆ, ಓಂಕಾರ್ ಬಡಾವಣೆ, ಅಮೋಘ ಪ್ಯಾಲೆಸ್ ಹೊಟೇಲ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಎನ್ಆರ್‌  ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

2 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

2 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

2 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

2 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

2 hours ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

3 hours ago