ಮೈಸೂರು

ಮೈಸೂರಿನ ಈ ಪ್ರದೇಶಗಳಲ್ಲಿ ನಾಳೆ (ಮೇ.೧೪) ವಿದ್ಯುತ್ ವ್ಯತ್ಯಯ

ಮೈಸೂರು: ನಗರದ ಹಲವೆಡೆ ನಿರ್ವಹಣಾ ಕಾಮಾಗಾರಿ ಹಮ್ಮಿಕೊಂಡಿರುವುದರಿಂದ ಮೇ.೧೪ ರಂದು ವಿದ್ಯುತ್‌ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಚೆಸ್ಕಾಂ ತಿಳಿಸಿದೆ.

66/11 ಕೆ.ವಿ ದೇವನೂರು ಮತ್ತು ರಾಜೀವನಗರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ ವತಿಯಿಂದ 2ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿರುವುದರಿಂದ ಬೆಳಿಗ್ಗೆ 10:00 ರಿಂದ ಸಂಜೆ 5:30 ಘಂಟೆಯವರೆಗೆ ವಿದ್ಯುತ್‌ ಪ್ರಸರಣದಲ್ಲಿ ವ್ಯತ್ಯಯ ಉಂಟಾಗಲಿದೆ.

ದೇವನೂರು ವಿದ್ಯುತ್‌ ವಿತರಣಾ ಕೇಂದ್ರದ ವ್ಯಾಪ್ತಿಯ ಬಿ.ಡಿ ಕಾಲೋನಿ, ಅಜೀಜ್ ಸೇಲ್ ನಗರ, 320 ಮನೆ, ಕೆಸರಿ ಕಾಲೋನಿ, ಮಹದೇವಪುರ ಮುಖ್ಯ ರಸ್ತೆ, ಶಕ್ತಿನಗರ, ರಾಜ್‌ಕುಮಾರ್ ರಸ್ತೆ, ಕಲ್ಯಾಣಗಿರಿ, ಅಕ್ಷಯ ಭಂಡಾರ್. ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯ, ಸಾತಗಳ್ಳಿ, ಗಳಗರಹುಂಡಿ, ನೆಹರು ನಗರ, ಸಾತಗಳ್ಳಿ ಗ್ರಾಮ,ಡಿ.ಟಿ.ಎಸ್ ರಾವ್ ನಗರ. ವಿ.ಟಿ.ಯೂ ಕಾಲೇಜು ಎದುರು, ಸನ್ ಪ್ಯೂರ್ ಬಡಾವಣೆ, ಸಾತಗಳ್ಳಿ ಬಿ ಜೋನ್, ವಿಟಿಯೂ ಕಾಲೇಜು, ಭಾರತ್ ನಗರ, ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.

ರಾಜೀವ್‌ನಗರ ವಿ.ವಿ ಕೇಂದ್ರದ ವ್ಯಾಪ್ತಿಯ ರಾಜೀವನಗರ 2ನೇ ಹಂತ, ಕ್ರಿಶ್ಚಿಯನ್ ಕಾಲೋನಿ, ಯಾಸಿನ್ ಮಸ್ಜಿದ್, ಎಸ್.ಬಡಾವಣೆ, ಸೂರ್ಯನಾರಾಯಣ ದೇವಸ್ಥಾನ ರಸ್ತೆ, ಆಲ್ ಬಜಾರ್ ಮಸ್ಜಿದ್, ವೃತ್ತ, ಅಂಬೇಡ್ಕರ್ ಭವನ ರಸ್ತೆ, ಕ್ಯೂಬಾ ಮಸ್ಜಿದ್ ವೃತ್ತ, ನಾರಾಯಣ ಹೃದಯಾಲಯ ಆಸ್ಪತ್ರೆ, ಕಾಮನಕೆರೆಹುಂಡಿ, ಕೆ.ಹೆಚ್.ಬಿ. ಬಡಾವಣೆ, RTO-55, ಆಸೀನಾ ಬಡಾವಣೆ, ರಾಜೀವನಗರ 3ನೇ ಹಂತ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಚೆಸ್ಕಾಂ ಮನವಿ ಮಾಡಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

18 mins ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

1 hour ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

3 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

3 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

4 hours ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

4 hours ago