ಮೈಸೂರು

ಮೈಸೂರಿನ ಈ ಪ್ರದೇಶಗಳಲ್ಲಿ ನಾಳೆ (ಮೇ.೧೪) ವಿದ್ಯುತ್ ವ್ಯತ್ಯಯ

ಮೈಸೂರು: ನಗರದ ಹಲವೆಡೆ ನಿರ್ವಹಣಾ ಕಾಮಾಗಾರಿ ಹಮ್ಮಿಕೊಂಡಿರುವುದರಿಂದ ಮೇ.೧೪ ರಂದು ವಿದ್ಯುತ್‌ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಚೆಸ್ಕಾಂ ತಿಳಿಸಿದೆ.

66/11 ಕೆ.ವಿ ದೇವನೂರು ಮತ್ತು ರಾಜೀವನಗರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ ವತಿಯಿಂದ 2ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿರುವುದರಿಂದ ಬೆಳಿಗ್ಗೆ 10:00 ರಿಂದ ಸಂಜೆ 5:30 ಘಂಟೆಯವರೆಗೆ ವಿದ್ಯುತ್‌ ಪ್ರಸರಣದಲ್ಲಿ ವ್ಯತ್ಯಯ ಉಂಟಾಗಲಿದೆ.

ದೇವನೂರು ವಿದ್ಯುತ್‌ ವಿತರಣಾ ಕೇಂದ್ರದ ವ್ಯಾಪ್ತಿಯ ಬಿ.ಡಿ ಕಾಲೋನಿ, ಅಜೀಜ್ ಸೇಲ್ ನಗರ, 320 ಮನೆ, ಕೆಸರಿ ಕಾಲೋನಿ, ಮಹದೇವಪುರ ಮುಖ್ಯ ರಸ್ತೆ, ಶಕ್ತಿನಗರ, ರಾಜ್‌ಕುಮಾರ್ ರಸ್ತೆ, ಕಲ್ಯಾಣಗಿರಿ, ಅಕ್ಷಯ ಭಂಡಾರ್. ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯ, ಸಾತಗಳ್ಳಿ, ಗಳಗರಹುಂಡಿ, ನೆಹರು ನಗರ, ಸಾತಗಳ್ಳಿ ಗ್ರಾಮ,ಡಿ.ಟಿ.ಎಸ್ ರಾವ್ ನಗರ. ವಿ.ಟಿ.ಯೂ ಕಾಲೇಜು ಎದುರು, ಸನ್ ಪ್ಯೂರ್ ಬಡಾವಣೆ, ಸಾತಗಳ್ಳಿ ಬಿ ಜೋನ್, ವಿಟಿಯೂ ಕಾಲೇಜು, ಭಾರತ್ ನಗರ, ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.

ರಾಜೀವ್‌ನಗರ ವಿ.ವಿ ಕೇಂದ್ರದ ವ್ಯಾಪ್ತಿಯ ರಾಜೀವನಗರ 2ನೇ ಹಂತ, ಕ್ರಿಶ್ಚಿಯನ್ ಕಾಲೋನಿ, ಯಾಸಿನ್ ಮಸ್ಜಿದ್, ಎಸ್.ಬಡಾವಣೆ, ಸೂರ್ಯನಾರಾಯಣ ದೇವಸ್ಥಾನ ರಸ್ತೆ, ಆಲ್ ಬಜಾರ್ ಮಸ್ಜಿದ್, ವೃತ್ತ, ಅಂಬೇಡ್ಕರ್ ಭವನ ರಸ್ತೆ, ಕ್ಯೂಬಾ ಮಸ್ಜಿದ್ ವೃತ್ತ, ನಾರಾಯಣ ಹೃದಯಾಲಯ ಆಸ್ಪತ್ರೆ, ಕಾಮನಕೆರೆಹುಂಡಿ, ಕೆ.ಹೆಚ್.ಬಿ. ಬಡಾವಣೆ, RTO-55, ಆಸೀನಾ ಬಡಾವಣೆ, ರಾಜೀವನಗರ 3ನೇ ಹಂತ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಚೆಸ್ಕಾಂ ಮನವಿ ಮಾಡಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

17 mins ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

54 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

1 hour ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

1 hour ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

2 hours ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

2 hours ago