ಮೈಸೂರು

ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು: ನಗರದ ಕೆಲವೆಡೆ ವಿದ್ಯುತ್ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಸೆಸ್ಕಾಂ ತಿಳಿಸಿದೆ.

ಜೂ.02 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ ಕಡಕೊಳ ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು ಎಫ್.ಟಿ.ಎಸ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕಡಕೊಳ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು: ಕಡಕೊಳ, ಬ್ಯಾತಹಳ್ಳಿ, ದಡದಹಳ್ಳಿ, ಸಿಂಧುವಳ್ಳಿ, ದೊಡ್ಡಕಾನ್ಯ, ಚಿಕ್ಕ ಕಾನ್ಯ, ಕೂಡನಹಳ್ಳಿ, ಕೋಚನಹಳ್ಳಿ, ಮರಸೆ, ಮಾಕನಹುಂಡಿ, ಕೆ.ಐ.ಎ.ಡಿ.ಬಿ ಇಂಡಸ್ಟ್ರಿಯಲ್ ಏರಿಯಾ, ವಿಮಾನ ನಿಲ್ದಾಣ, ಬಿರೇಗೌಡನಹುಂಡಿ, ಕೆ.ಎಂ. ಹುಂಡಿ, ಬಿ.ಜಿ. ಹುಂಡಿ, ಕೆ.ಎನ್. ಹುಂಡಿ, ಆಯರಹಳ್ಳಿ, ಕಿರಾಳು, ದೂರ, ಮುರುಡಗಳ್ಳಿ, ತಳೂರು, ಡಿ. ಕಾಟೂರು, ಟಿ.ವಿ.ಎಸ್. ಫ್ಯಾಕ್ಟರಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.

ಎಫ್.ಟಿ.ಎಸ್ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು: ಸುಭಾಷ್‌ನಗರ, ಕೆಸರೆ 1ನೇ, 2ನೇ ಹಾಗೂ 3ನೇ ಹಂತ, ನ.ರಾ ಮೊಹಲ್ಲಾ, ಗಾಂಧಿನಗರ, ಮೊಹಮ್ಮದ್ ಸೇಠ್ ಬ್ಲಾಕ್, ವೀರನಗೆರೆ, ಉದಯಗಿರಿ, ಬನ್ನಿಮಂಟಪ, ನೆಲ್ಸನ್ ಮಂಡೇಲಾ ರಸ್ತೆ, ಎಲ್.ಐ.ಸಿ, ಹೈವೆ ವೃತ್ತ, ತಿಲಕ್‌ನಗರ, ಉಮ್ಮರ್ ಖಾಯಂ ರಸ್ತೆ, ನ್ಯೂ ಸಯ್ಯಾಜಿ ರಾವ್ ರಸ್ತೆ, ರಾಜೇಂದ್ರನಗರ, ಮೇದರ್ ಬ್ಲಾಕ್, ಬಂಬೂ ಬಜಾರ್, ಲಯನ್ಸ್ ಕ್ಲಬ್, ಫರೂಕೀ ಡೆಂಟಲ್ ಕಾಲೇಜು, ಜೈಲ್ ವಸತಿ ಗೃಹ, ಐ.ಟಿ.ಐ ಕಾಲೇಜು, ಭಾವನಾ ಮಾರ್ಬಲ್ ರಸ್ತೆ, ‘ಎ’ ಬಡಾವಣೆ, ಬಿ.ಬಿ ಕೇರಿ, ಬಿ.ಟಿ ಮಿಲ್ ರಸ್ತೆ, ಈದ್ಗ ಮೈದಾನ, ಕಬೀರ್ ಮಠ, ಆನೆಗುಂದಿ ರಸ್ತೆ, ಹನುಮಂತನಗರ, ಕೆ.ಎಸ್.ಆರ್.ಟಿ.ಸಿ, ಎಸ್.ಎಸ್ ನಗರ, ಕಾವೇರಿ ನಗರ, ಸಿದ್ದಿಖಿ ನಗರ, ಬನ್ನಿಮಂಟಪ ‘ಸಿ’ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ನ.ರಾ.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ)  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

7 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

7 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

8 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

13 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

14 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

14 hours ago