ಮೈಸೂರು

ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು: ನಗರದ ಕೆಲವೆಡೆ ವಿದ್ಯುತ್ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಸೆಸ್ಕಾಂ ತಿಳಿಸಿದೆ.

ಜೂ.02 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ ಕಡಕೊಳ ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು ಎಫ್.ಟಿ.ಎಸ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕಡಕೊಳ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು: ಕಡಕೊಳ, ಬ್ಯಾತಹಳ್ಳಿ, ದಡದಹಳ್ಳಿ, ಸಿಂಧುವಳ್ಳಿ, ದೊಡ್ಡಕಾನ್ಯ, ಚಿಕ್ಕ ಕಾನ್ಯ, ಕೂಡನಹಳ್ಳಿ, ಕೋಚನಹಳ್ಳಿ, ಮರಸೆ, ಮಾಕನಹುಂಡಿ, ಕೆ.ಐ.ಎ.ಡಿ.ಬಿ ಇಂಡಸ್ಟ್ರಿಯಲ್ ಏರಿಯಾ, ವಿಮಾನ ನಿಲ್ದಾಣ, ಬಿರೇಗೌಡನಹುಂಡಿ, ಕೆ.ಎಂ. ಹುಂಡಿ, ಬಿ.ಜಿ. ಹುಂಡಿ, ಕೆ.ಎನ್. ಹುಂಡಿ, ಆಯರಹಳ್ಳಿ, ಕಿರಾಳು, ದೂರ, ಮುರುಡಗಳ್ಳಿ, ತಳೂರು, ಡಿ. ಕಾಟೂರು, ಟಿ.ವಿ.ಎಸ್. ಫ್ಯಾಕ್ಟರಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.

ಎಫ್.ಟಿ.ಎಸ್ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು: ಸುಭಾಷ್‌ನಗರ, ಕೆಸರೆ 1ನೇ, 2ನೇ ಹಾಗೂ 3ನೇ ಹಂತ, ನ.ರಾ ಮೊಹಲ್ಲಾ, ಗಾಂಧಿನಗರ, ಮೊಹಮ್ಮದ್ ಸೇಠ್ ಬ್ಲಾಕ್, ವೀರನಗೆರೆ, ಉದಯಗಿರಿ, ಬನ್ನಿಮಂಟಪ, ನೆಲ್ಸನ್ ಮಂಡೇಲಾ ರಸ್ತೆ, ಎಲ್.ಐ.ಸಿ, ಹೈವೆ ವೃತ್ತ, ತಿಲಕ್‌ನಗರ, ಉಮ್ಮರ್ ಖಾಯಂ ರಸ್ತೆ, ನ್ಯೂ ಸಯ್ಯಾಜಿ ರಾವ್ ರಸ್ತೆ, ರಾಜೇಂದ್ರನಗರ, ಮೇದರ್ ಬ್ಲಾಕ್, ಬಂಬೂ ಬಜಾರ್, ಲಯನ್ಸ್ ಕ್ಲಬ್, ಫರೂಕೀ ಡೆಂಟಲ್ ಕಾಲೇಜು, ಜೈಲ್ ವಸತಿ ಗೃಹ, ಐ.ಟಿ.ಐ ಕಾಲೇಜು, ಭಾವನಾ ಮಾರ್ಬಲ್ ರಸ್ತೆ, ‘ಎ’ ಬಡಾವಣೆ, ಬಿ.ಬಿ ಕೇರಿ, ಬಿ.ಟಿ ಮಿಲ್ ರಸ್ತೆ, ಈದ್ಗ ಮೈದಾನ, ಕಬೀರ್ ಮಠ, ಆನೆಗುಂದಿ ರಸ್ತೆ, ಹನುಮಂತನಗರ, ಕೆ.ಎಸ್.ಆರ್.ಟಿ.ಸಿ, ಎಸ್.ಎಸ್ ನಗರ, ಕಾವೇರಿ ನಗರ, ಸಿದ್ದಿಖಿ ನಗರ, ಬನ್ನಿಮಂಟಪ ‘ಸಿ’ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ನ.ರಾ.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ)  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

41 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

43 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

44 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

46 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

50 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

55 mins ago