ಮೈಸೂರು

ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು: ನಗರದ ಕೆಲವೆಡೆ ವಿದ್ಯುತ್ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಸೆಸ್ಕಾಂ ತಿಳಿಸಿದೆ.

ಜೂ.02 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ ಕಡಕೊಳ ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು ಎಫ್.ಟಿ.ಎಸ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕಡಕೊಳ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು: ಕಡಕೊಳ, ಬ್ಯಾತಹಳ್ಳಿ, ದಡದಹಳ್ಳಿ, ಸಿಂಧುವಳ್ಳಿ, ದೊಡ್ಡಕಾನ್ಯ, ಚಿಕ್ಕ ಕಾನ್ಯ, ಕೂಡನಹಳ್ಳಿ, ಕೋಚನಹಳ್ಳಿ, ಮರಸೆ, ಮಾಕನಹುಂಡಿ, ಕೆ.ಐ.ಎ.ಡಿ.ಬಿ ಇಂಡಸ್ಟ್ರಿಯಲ್ ಏರಿಯಾ, ವಿಮಾನ ನಿಲ್ದಾಣ, ಬಿರೇಗೌಡನಹುಂಡಿ, ಕೆ.ಎಂ. ಹುಂಡಿ, ಬಿ.ಜಿ. ಹುಂಡಿ, ಕೆ.ಎನ್. ಹುಂಡಿ, ಆಯರಹಳ್ಳಿ, ಕಿರಾಳು, ದೂರ, ಮುರುಡಗಳ್ಳಿ, ತಳೂರು, ಡಿ. ಕಾಟೂರು, ಟಿ.ವಿ.ಎಸ್. ಫ್ಯಾಕ್ಟರಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.

ಎಫ್.ಟಿ.ಎಸ್ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು: ಸುಭಾಷ್‌ನಗರ, ಕೆಸರೆ 1ನೇ, 2ನೇ ಹಾಗೂ 3ನೇ ಹಂತ, ನ.ರಾ ಮೊಹಲ್ಲಾ, ಗಾಂಧಿನಗರ, ಮೊಹಮ್ಮದ್ ಸೇಠ್ ಬ್ಲಾಕ್, ವೀರನಗೆರೆ, ಉದಯಗಿರಿ, ಬನ್ನಿಮಂಟಪ, ನೆಲ್ಸನ್ ಮಂಡೇಲಾ ರಸ್ತೆ, ಎಲ್.ಐ.ಸಿ, ಹೈವೆ ವೃತ್ತ, ತಿಲಕ್‌ನಗರ, ಉಮ್ಮರ್ ಖಾಯಂ ರಸ್ತೆ, ನ್ಯೂ ಸಯ್ಯಾಜಿ ರಾವ್ ರಸ್ತೆ, ರಾಜೇಂದ್ರನಗರ, ಮೇದರ್ ಬ್ಲಾಕ್, ಬಂಬೂ ಬಜಾರ್, ಲಯನ್ಸ್ ಕ್ಲಬ್, ಫರೂಕೀ ಡೆಂಟಲ್ ಕಾಲೇಜು, ಜೈಲ್ ವಸತಿ ಗೃಹ, ಐ.ಟಿ.ಐ ಕಾಲೇಜು, ಭಾವನಾ ಮಾರ್ಬಲ್ ರಸ್ತೆ, ‘ಎ’ ಬಡಾವಣೆ, ಬಿ.ಬಿ ಕೇರಿ, ಬಿ.ಟಿ ಮಿಲ್ ರಸ್ತೆ, ಈದ್ಗ ಮೈದಾನ, ಕಬೀರ್ ಮಠ, ಆನೆಗುಂದಿ ರಸ್ತೆ, ಹನುಮಂತನಗರ, ಕೆ.ಎಸ್.ಆರ್.ಟಿ.ಸಿ, ಎಸ್.ಎಸ್ ನಗರ, ಕಾವೇರಿ ನಗರ, ಸಿದ್ದಿಖಿ ನಗರ, ಬನ್ನಿಮಂಟಪ ‘ಸಿ’ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ನ.ರಾ.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ)  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳೆಗಾಲ ಶುರುವಾದರೆ ವಿದ್ಯುತ್ ಸಮಸ್ಯೆ !

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ…

21 mins ago

ಕನಿಷ್ಠ ಸೌಲಭ್ಯಗಳೂ ಇಲ್ಲದ ಮಂಡ್ಯ ತಾಲ್ಲೂಕು ಕಚೇರಿ

ಹೇಮಂತ್ ಕುಮಾರ್ ಜಾತಿ, ಆದಾಯ ಪ್ರಮಾಣ ಪತ್ರಕ್ಕೂ ಅಲೆದಾಟ; ಸರತಿ ಸಾಲಿನಲ್ಲಿ ನಿಂತು ಜನರ ಗೊಣಗಾಟ ಮಂಡ್ಯ: ತಾಲ್ಲೂಕು ಕೇಂದ್ರವಾದ…

24 mins ago

ಕೈಕೊಟ್ಟ ಮುಂಗಾರು ಮಳೆ; ಕಂಗಾಲಾದ ಅನ್ನದಾತರು

ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ…

28 mins ago

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

19 hours ago