ಮೈಸೂರು

ಫೈನಾನ್ಸ್‌ ಕಂಪೆನಿಗಳು, ಪೊಲೀಸರ ರಕ್ಷಣೆ ಪಡೆದೇ ಸಾಲಗಾರರಿಗೆ ತೊಂದರೆ ನೀಡುತ್ತಿವೆ: ಪ್ರಹ್ಲಾದ್‌ ಜೋಶಿ

ಮೈಸೂರು: ರಾಜ್ಯದಲ್ಲಿ ಫೈನಾನ್ಸ್‌ ಕಂಪೆನಿಗಳು ಪೊಲೀಸರ ರಕ್ಷಣೆ ಪಡೆದೇ ಸಾಲಗಾರರಿಗೆ ತೊಂದರೆ ನೀಡುತ್ತಿವೆ ಎಂಬ ಮಾಹಿತಿ ಇದೆ. ಆದರೆ ನಾನು ಇಲ್ಲಿ ಪೊಲೀಸರ ಮೇಲೆ ಆರೋಪಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ.27) ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿರುವುದರಿಂದಲೇ ಇದೆಲ್ಲವೂ ಆಗುತ್ತಿದ್ದು, ಸಾರ್ವಜನಿಕರಿಗೆ ಕಿರುಕುಳ ನೀಡುವ ಪ್ರಕರಣಗಳು ನಡೆಯುತ್ತಿವೆ. ನೋಂದಾಯಿತ ಮೈಕ್ರೋ ಫೈನಾನ್ಸ್‌ ಕಂಪೆನಿಗಳು ಮಾತ್ರವೇ ಆರ್‌ಬಿಐ ಮಾರ್ಗಸೂಚಿಗೆ ಒಳಪಡುತ್ತವೆ ಎಂಬುದನ್ನು ರಾಜ್ಯ ಸರ್ಕಾರ ಗಮನಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹೀಗಾಗಿ ಮೈಕ್ರೋ ಫೈನಾನ್ಸ್‌ ಕಂಪೆನಿಗಳ ವಿರುದ್ಧ ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಆರ್‌ಬಿಐ ಮಾರ್ಗಸೂಚಿಯ ಪ್ರಕಾರ ಸಾಲಕ್ಕೆ ಇಂತಿಷ್ಟೇ ಬಡ್ಡಿ ವಿಧಿಸಬೇಕು ಎಂಬುದು ಇದೆ. ಆದರೆ ನೋಂದಾಯಿಸದ ಫೈನಾನ್ಸ್‌ ಕಂಪೆನಿಗಳು ಸಾಕಷ್ಟಿವೆ. ಅವುಗಳನ್ನು ಸರ್ಕಾರ ನಿಯಂತ್ರಿಸಬೇಕು. ಅಲ್ಲದೇ ಫೈನಾನ್ಸ್‌ಗಳ ವಿರುದ್ಧ ಸಮಿತಿ ರಚಿಸಿ ಪ್ರಾಮಾಣಿಕ ಅಧಿಕಾರಿಗಳನ್ನು ನೇಮಕ ಮಾಡಿ ಮೇಲ್ವಿಚಾರಣೆ ಮಾಡಬೇಕು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

27 mins ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

53 mins ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

2 hours ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

2 hours ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

2 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

3 hours ago