ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಬೀಡುಬಿಟ್ಟಿದ್ದು, ಸ್ವದೇಶಕ್ಕೆ ಯಾವಾಗ ಮರಳಿದ್ದಾರೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಉತ್ತರಿಸಿದ್ದು, ಪ್ರಜ್ವಲ್ ಇದುವರೆಗೂ ಸಹ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದಿದ್ದಾರೆ.
ಪ್ರಜ್ವಲ ಎಲ್ಲಿದ್ದಾರೆ? ಯಾವಾಗ ಬರುತ್ತಾರೆ? ಎಂಬುದು ಯಾರಿಗೂ ಗೊತ್ತಿಲ್ಲ. ಪ್ರಜ್ವಲ್ ಮನೆಯವರಿಗೂ ಗೊತ್ತಿಲ್ಲ, ನಮಗೂ ಸಹ ಗೊತ್ತಿಲ್ಲ. ಪ್ರಜ್ವಲ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈಗಾಗಲೇ ಪ್ರಜ್ವಲ್ನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ತಪ್ಪು ಮಾಡಿದ್ದರೆ ನೂರಕ್ಕೆ ನೂರು ಶಿಕ್ಷೆಯಾಗಲಿ ಎಂದು ನಮ್ಮ ನಾಯಕರು ಕುಮಾರಸ್ವಾಮಿಯವರು ಹೇಳಿದ್ದಾರೆ, ನಾನೂ ಸಹ ಹೇಳಿದ್ದೇನೆ. ಇನ್ನೇನಿದ್ದರೂ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
ಪ್ರಜ್ವಲ್ ವಿದೇಶಕ್ಕೆ ಯಾಕೆ ಹೋದರು, ಯಾವಾಗ ಬರುತ್ತಾರೆ, ಯಾವಾಗ ಬರುವುದಿಲ್ಲ, ಇದ್ಯಾವುದರ ಕುರಿತು ನಮಗೆ ಸುಳಿವು ಇಲ್ಲ. ಅವರ ಕುಟುಂಬಕ್ಕೆ ಗೊತ್ತಿಲ್ಲದ ಮೇಲೆ ನಮಗೆ ಹೇಗೆ ಗೊತ್ತಿರುತ್ತದೆ? ಈಗಾಗಲೇ ಬ್ಲೂ ಕಾರ್ನರ್, ರೆಡ್ ಕಾರ್ನರ್ ನೋಟಿಸ್ ನೀಡಲಾಗಿದೆ. ಇನ್ನೇನಿದ್ದರೂ ಸರ್ಕಾರದ ಜವಾಬ್ದಾರಿ ಎಂದು ಜಿಟಿಡಿ ತಿಳಿಸಿದರು.
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…
ಮೈಸೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…