ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಬೀಡುಬಿಟ್ಟಿದ್ದು, ಸ್ವದೇಶಕ್ಕೆ ಯಾವಾಗ ಮರಳಿದ್ದಾರೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಉತ್ತರಿಸಿದ್ದು, ಪ್ರಜ್ವಲ್ ಇದುವರೆಗೂ ಸಹ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದಿದ್ದಾರೆ.
ಪ್ರಜ್ವಲ ಎಲ್ಲಿದ್ದಾರೆ? ಯಾವಾಗ ಬರುತ್ತಾರೆ? ಎಂಬುದು ಯಾರಿಗೂ ಗೊತ್ತಿಲ್ಲ. ಪ್ರಜ್ವಲ್ ಮನೆಯವರಿಗೂ ಗೊತ್ತಿಲ್ಲ, ನಮಗೂ ಸಹ ಗೊತ್ತಿಲ್ಲ. ಪ್ರಜ್ವಲ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈಗಾಗಲೇ ಪ್ರಜ್ವಲ್ನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ತಪ್ಪು ಮಾಡಿದ್ದರೆ ನೂರಕ್ಕೆ ನೂರು ಶಿಕ್ಷೆಯಾಗಲಿ ಎಂದು ನಮ್ಮ ನಾಯಕರು ಕುಮಾರಸ್ವಾಮಿಯವರು ಹೇಳಿದ್ದಾರೆ, ನಾನೂ ಸಹ ಹೇಳಿದ್ದೇನೆ. ಇನ್ನೇನಿದ್ದರೂ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
ಪ್ರಜ್ವಲ್ ವಿದೇಶಕ್ಕೆ ಯಾಕೆ ಹೋದರು, ಯಾವಾಗ ಬರುತ್ತಾರೆ, ಯಾವಾಗ ಬರುವುದಿಲ್ಲ, ಇದ್ಯಾವುದರ ಕುರಿತು ನಮಗೆ ಸುಳಿವು ಇಲ್ಲ. ಅವರ ಕುಟುಂಬಕ್ಕೆ ಗೊತ್ತಿಲ್ಲದ ಮೇಲೆ ನಮಗೆ ಹೇಗೆ ಗೊತ್ತಿರುತ್ತದೆ? ಈಗಾಗಲೇ ಬ್ಲೂ ಕಾರ್ನರ್, ರೆಡ್ ಕಾರ್ನರ್ ನೋಟಿಸ್ ನೀಡಲಾಗಿದೆ. ಇನ್ನೇನಿದ್ದರೂ ಸರ್ಕಾರದ ಜವಾಬ್ದಾರಿ ಎಂದು ಜಿಟಿಡಿ ತಿಳಿಸಿದರು.
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…