ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಬೀಡುಬಿಟ್ಟಿದ್ದು, ಸ್ವದೇಶಕ್ಕೆ ಯಾವಾಗ ಮರಳಿದ್ದಾರೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಉತ್ತರಿಸಿದ್ದು, ಪ್ರಜ್ವಲ್ ಇದುವರೆಗೂ ಸಹ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದಿದ್ದಾರೆ.
ಪ್ರಜ್ವಲ ಎಲ್ಲಿದ್ದಾರೆ? ಯಾವಾಗ ಬರುತ್ತಾರೆ? ಎಂಬುದು ಯಾರಿಗೂ ಗೊತ್ತಿಲ್ಲ. ಪ್ರಜ್ವಲ್ ಮನೆಯವರಿಗೂ ಗೊತ್ತಿಲ್ಲ, ನಮಗೂ ಸಹ ಗೊತ್ತಿಲ್ಲ. ಪ್ರಜ್ವಲ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈಗಾಗಲೇ ಪ್ರಜ್ವಲ್ನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ತಪ್ಪು ಮಾಡಿದ್ದರೆ ನೂರಕ್ಕೆ ನೂರು ಶಿಕ್ಷೆಯಾಗಲಿ ಎಂದು ನಮ್ಮ ನಾಯಕರು ಕುಮಾರಸ್ವಾಮಿಯವರು ಹೇಳಿದ್ದಾರೆ, ನಾನೂ ಸಹ ಹೇಳಿದ್ದೇನೆ. ಇನ್ನೇನಿದ್ದರೂ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
ಪ್ರಜ್ವಲ್ ವಿದೇಶಕ್ಕೆ ಯಾಕೆ ಹೋದರು, ಯಾವಾಗ ಬರುತ್ತಾರೆ, ಯಾವಾಗ ಬರುವುದಿಲ್ಲ, ಇದ್ಯಾವುದರ ಕುರಿತು ನಮಗೆ ಸುಳಿವು ಇಲ್ಲ. ಅವರ ಕುಟುಂಬಕ್ಕೆ ಗೊತ್ತಿಲ್ಲದ ಮೇಲೆ ನಮಗೆ ಹೇಗೆ ಗೊತ್ತಿರುತ್ತದೆ? ಈಗಾಗಲೇ ಬ್ಲೂ ಕಾರ್ನರ್, ರೆಡ್ ಕಾರ್ನರ್ ನೋಟಿಸ್ ನೀಡಲಾಗಿದೆ. ಇನ್ನೇನಿದ್ದರೂ ಸರ್ಕಾರದ ಜವಾಬ್ದಾರಿ ಎಂದು ಜಿಟಿಡಿ ತಿಳಿಸಿದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…