ಮೈಸೂರು

ಎಸ್‌ಐಟಿ ತನಿಖಾ ಸಂಸ್ಥೆ ಮೇಲೆ ನಮಗೆ ನಂಬಿಕೆಯಿಲ್ಲ: ಜಿಟಿ ದೇವೇಗೌಡ

ಮೈಸೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮೇ.16) ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಮಾತನಾಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಈವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ನನಗಿರಬಹುದು ಅಥವಾ ಅವರ ಕುಟುಂಬಕ್ಕಿರಬಹುದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ವಿಚಾರ ಯಾರಿಗೂ ತಿಳಿಯುತ್ತಿಲ್ಲ. ಇದರಿಂದಲೇ ಸರ್ಕಾರ 196 ದೇಶಗಳಿಗೆ ಬ್ಲೂ ಕಾರ್ನರ್‌ ನೋಟಿಸ್ ನೀಡಿದೆ. ಈ ಮೂಲಕ ಅವರು ಸಿಗಬಹುದೇ ಹೊರತು ಅವರ ಕುಟುಂಬಕ್ಕಾಗಲಿ, ರಾಜಕೀಯ ನಾಯಕರಾದ ನಮಗಾಗಲಿ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದರು.

ಎಸ್‌ಐಟಿ ಸರ್ಕಾರ ಹೇಳಿದಂತೆ ತನಿಖೆ ಮಾಡುತ್ತಿದೆ. ಈ ತನಿಖಾ ಸಂಸ್ಥೆ ಮೇಲೆ ನಮಗೆ ನಂಬಿಕೆಯಿಲ್ಲ. ಮುಖ್ಯಮಂತ್ರಿ ಹೇಳಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದಿದ್ದಾರೆ. ಎಸ್‌ಐಟಿ ರಾಜ್ಯ ಸರ್ಕಾರ ಹೇಳಿದಂತೆ ಕೇಳುವುದರಿಂದ ಈ ಪ್ರಕರಣ ರಾಜ್ಯಾದ್ಯಂತ ವ್ಯಾಪಕವಾಗಿ ಹರಡಿದೆ. ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ಪ್ರಕರಣ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

ಇನ್ನು ರಾಜ್ಯಾದ್ಯಂತ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ರೇವಣ್ಣ ಅವರ ಮೇಲೆ ಸುಳ್ಳು ಕಿಡ್ನಾಪ್‌ ಪ್ರಕರಣ ಹಾಕಿ ಬಂಧಿಸಿದ್ದಕ್ಕಾಗಿಯೇ ಹೊರತು ಪ್ರಜ್ವಲ್‌ ಪ್ರಕರಣಕ್ಕಾಗಿ ಅಲ್ಲ ಎಂದು ಸ್ಪಷ್ಟೀಕರಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು: ಲೋಕಾಯುಕ್ತ ಪೊಲೀಸರಿಂದ ಏಳು ಕಡೆ ದಾಳಿ: ದಾಖಲೆಗಳ ಪರಿಶೀಲನೆ

ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…

14 mins ago

ಸರಗೂರು| ಕಾಡಾನೆ ದಾಳಿ: ದೇವಸ್ಥಾನದ ಕಾವಲುಗಾರ ಸಾವು

ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…

1 hour ago

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

4 hours ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

4 hours ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

4 hours ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

4 hours ago