ಮೈಸೂರು

ಮಹಾ ಕುಂಭಮೇಳ ಸ್ನಾನ: ನಕಲಿ ಫೋಟೋ ಶೇರ್‌ ಮಾಡಿದ್ದ ಪ್ರಶಾಂತ್‌ ಸಂಬರ್ಗಿ ವಿರುದ್ಧ ದೂರು ದಾಖಲಿಸಿದ ಪ್ರಕಾಶ್‌ ರಾಜ್‌

ಮೈಸೂರು: ಮಹಾಕುಂಭಮೇಳದಲ್ಲಿ ನಟ ಪ್ರಕಾಶ್‌ ರಾಜ್‌ ಸ್ನಾನ ಮಾಡುತ್ತಿರುವ ರೀತಿಯಂತಹ ನಕಲಿ ಫೋಟೋವನ್ನು ವೈರಲ್‌ ಮಾಡಿ ಶೇರ್‌ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರ್ಗಿ ಅವರ ವಿರುದ್ಧ ಪ್ರಕಾಶ್‌ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ.

ಮೈಸೂರಿನ ಜಯಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದು, ಪ್ರಶಾಂತ್‌ ಸಂಬರ್ಗಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಈ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಪ್ರಕಾಶ್‌ ರಾಜ್‌ ಅವರು, ಕುಂಭಮೇಳದ ಪುಣ್ಯ ಸ್ನಾನ ದೇಶದಲ್ಲಿ ನಡೆಯುತ್ತಿದೆ. ಈ ಸ್ನಾನ ಹಿಂದೂ ಧರ್ಮದವರಿಗೆ ಮತ್ತು ದೇವರನ್ನು ನಂಬಿ, ಪೂಜಿಸುವವರಿಗೆ ಅದು ಪುಣ್ಯ ಸ್ಥಳವಾಗಿದೆ. ಹೀಗಿರುವಾಗ ಎಐ ಆಪ್‌ ಬಳಸಿ ಪ್ರಕಾಶ್‌ ರಾಜ್‌ ಕುಂಭಮೇಳದಲ್ಲಿ ಸ್ನಾನ ಮಾಡಿದರಾ? ಎಂದು ಫೋಟೋ ಶೇರ್‌ ಮಾಡಿ ವೈರಲ್‌ ಆಗುವಂತೆ ಮಾಡುತ್ತಿದ್ದಾರೆ. ಅಲ್ಲದೇ ಅಂತಹ ಪುಣ್ಯಕ್ಷೇತ್ರದಲ್ಲಿ ಸ್ನಾನ ಮಾಡುವ ವಿಚಾರದಲ್ಲೂ ಇದೀಗ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನೂ ಪ್ರಶಾಂತ್‌ ಸಂಬರ್ಗಿ ಫೋಟೋ ವೈರಲ್‌ ಮಾಡಿದಲ್ಲದೇ, ಪ್ರಕಾಶ್‌ ರಾಜ್‌ ಹಿಂದೂ ವಿರೋಧಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಅವರು ಪ್ರಖ್ಯಾತರೋ? ಅಥವಾ ಕುಖ್ಯಾತರೋ ನನಗೆ ತಿಳಿದಿಲ್ಲ. ಆದರೆ ದೇಶದಲ್ಲಿ ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಅಭ್ಯಾಸವಾಗಿದೆ. ಆದರೆ ಇದನ್ನು ಯಾರು ಪ್ರಶ್ನಿಸುತ್ತಿಲ್ಲ, ಅವರು ದ್ವೇಷವನ್ನು ಹರಡುತ್ತಿದ್ದಾರೆ. ಇವರು ನಿಜವಾದ ಹಿಂದೂ ಧರ್ಮದವರಲ್ಲ, ಅವರು ಸಾರ್ವಜನಿಕರ ನಂಬಿಕೆಗೆ ಆಘಾತ ಮಾಡುತ್ತಿದ್ದಾರೆ. ಹೀಗಾಗಿ ನನ್ನ ವಿರುದ್ಧ ಸಾಕಷ್ಟು ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಈ ಕಾರಣಕ್ಕೆ ಪ್ರಶಾಂತ್‌ ಸಂಬರ್ಗಿ ಮೇಲೆ ಕೇಸ್‌ ದಾಖಲಿಸಿದ್ದೇನೆ. ಹೀಗಾಗಿ ನನ್ನ ದೂರಿನ ಅನ್ವಯ ಎಫ್‌ಐಆರ್‌ ದಾಖಲಿಸಲಾಗಿದೆ. 15 ದಿನಗಳಲ್ಲಿ ಆ ವ್ಯಕ್ತಿ ಠಾಣೆಗೆ ಬಂದು ಉತ್ತರ ನೀಡಬೇಕು. ಹಾಗಾಗಿ ಸತ್ಯಾಸತ್ಯತರ ಎಲ್ಲರಿಗೂ ತಿಳಿಯಬೇಕು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

1 hour ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

1 hour ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

2 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

2 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

2 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

2 hours ago