ಮೈಸೂರು

ಪ್ರಸಾದ್ ಗಟ್ಟಿಯಾದ ಧ್ವನಿ ಬಿಟ್ಟು ಹೋಗಿದ್ದಾರೆ : ಆರ್.ಮಹಾದೇವಪ್ಪ

ಮೈಸೂರು: ಹಳ್ಳಿಗಾಡಿನಿಂದ ಬಂದಂತಹ ಅದೆಷ್ಟೋ ವಿದ್ಯಾರ್ಥಿಗಳಿಗೆ ಅಶೋಕಪುರಂ ಆಶ್ರಯ ತಾಣವಾಗಿತ್ತು. ಇದೊಂದು ಸಾಂಸ್ಕೃತಿಕ ಕೇಂದ್ರವೂ ಹೌದು. ಇಲ್ಲಿ ಹುಟ್ಟಿ ಬೆಳೆದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಗಟ್ಟಿಯಾದ ಧ್ವನಿಯನ್ನು ಬಿಟ್ಟು ಹೋಗಿದ್ದಾರೆ ಎಂದು ಕರ್ನಾಟಕ ಬುದ್ಧ ಧಮ್ಮ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ ತಿಳಿಸಿದರು.

ವಿಜಯನಗರ ೧ನೇ ಹಂತದ ಡಿ.ಸಂಜೀವ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧ ವಿಹಾರದಲ್ಲಿ ಕರ್ನಾಟಕ ಬುದ್ಧ ಧಮ್ಮ ಸಮಿತಿಯಲ್ಲಿ ಶನಿವಾರ ಸಂಜೆ ನಡೆದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಬದನವಾಳು ಗಲಾಟೆ ನಂತರ ದಲಿತರ ಮೇಲಿನ ದೌರ್ಜನ್ಯ ಒಂದಷ್ಟು ಕಡಿಮೆಯಾದವು. ಈ ಪ್ರಕರಣವು ವಿ.ಶ್ರೀನಿವಾಸ ಪ್ರಸಾದ್ ಅವರಿಗೆ ದೊಡ್ಡ ನಾಯಕತ್ವ ತಂದು ಕೊಟ್ಟಿತು. ಅಲ್ಲಿಂದ ದಲಿತ ಸಮುದಾಯಕ್ಕೆ ಗಟ್ಟಿಯಾದ ಧ್ವನಿಯಾಗಿದ್ದರು. ದಲಿತ ರಾಜಕಾರಣದಲ್ಲಿ ಪ್ರಸ್ತುತ ಇಂತಹ ಗಟ್ಟಿತನ, ಎದೆಗಾರಿಕೆವುಳ್ಳ ಧ್ವನಿ ಇರುವ ನಾಯಕ ಅನಿವಾರ್ಯ ಎಂದರು.

ಸಮಿತಿಯ ಅಧ್ಯಕ್ಷ ಪ್ರೊ.ಡಿ.ನಂಜುಂಡಯ್ಯ ಮಾತನಾಡಿ, ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ತಮ್ಮ ರಾಜಕೀಯ ಜೀವನವನ್ನು ಜನಸಂಘದಿಂದ ಪ್ರಾರಂಭಿಸಿ, ಜನಸಂಘದಿಂದಲೇ ಅವರು ರಾಜಕೀಯ ನಿವೃತ್ತಿಯನ್ನು ಘೋಷಿಸಿದರು. ಆದರೆ, ಅವರ ರಾಜಕೀಯ ಜೀವನದಲ್ಲಿ ದಲಿತ ಸಮುದಾಯಕ್ಕೆ ಹಾಗೂ ಅವರ ಹೆಸರಿನಲ್ಲಿ ಶಾಲೆ-ಕಾಲೇಜು, ಆಸ್ಪತ್ರೆ ಹೀಗೆ ಗುರುತರವಾದಂತಹದ್ದನ್ನು ಬಿಟ್ಟು ಹೋಗದಿರುವುದು ನೋವಿನ ಸಂಗತಿ ಎಂದರು.

ಪತ್ರಕರ್ತ ದೀಪಕ್ ಮಾತನಾಡಿ, ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಗಟ್ಟಿತನ ಎಲ್ಲರಿಗೂ ಮಾದರಿ. ಪ್ರಸಾದ್ ಒಬ್ಬ ದಲಿತ ಪಾಳೇಗಾರರಾಗಿದ್ದರು. ದಲಿತರಿಗೆ ಆರ್ಥಿಕವಾಗಿ, ರಾಜಕೀಯವಾಗಿ ಎಲ್ಲವೂ ಸಿಕ್ಕಿದೆ. ಆದರೆ, ಧ್ವನಿ ಇದ್ದು ಇಲ್ಲದವರಂತಾಗಿದ್ದರು. ಇದನ್ನು ಯಶಸ್ವಿಯಾಗಿ ಶ್ರೀನಿವಾಸ ಪ್ರಸಾದ್ ನಿಭಾಯಿಸಿದ್ದರು. ಆದರೆ, ಅವರ ಇತ್ತೀಚಿನ ರಾಜಕೀಯ ನಡೆ ಸಮುದಾಯಕ್ಕೆ ಬೇಸರ ತರಿಸಿತು ಎಂದರು.

ಮುಖಂಡ ಬಿ.ಎಂ.ಲಿಂಗರಾಜ್ ಮಾತನಾಡಿ, ವಿ.ಶ್ರೀನಿವಾಸ ಪ್ರಸಾದ್‌ರವರು ಎದೆಗಾರಿಕೆ ಇದ್ದ ವ್ಯಕ್ತಿ. ಪ್ರಾವಾಣಿಕವಾಗಿ ರಾಜಕಾರಣ ಮಾಡಿದರು. ಯಾವುದೇ ಭ್ರಷ್ಟಾಚಾರವಿಲ್ಲದೆ ರಾಜಕೀಯ ಜೀವನ ನಡೆಸಿದರು. ಆದರೆ, ಅವರ ನಂತರದ  ರಾಜಕಾರಣಿಯನ್ನು ಹುಟ್ಟು ಹಾಕದಿರುವುದು ಬೇಸರದ ಸಂಗತಿ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಎರಡು ನಿಮಿಷಗಳ ಕಾಲ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮದ ಸಮ್ಮುಖವನ್ನು ಬೌದ್ಧಬಿಕ್ಕು ಸೋದೆ ಭಂತೇಜಿ ವಹಿಸಿದ್ದರು. ಸಮಿತಿಯ ಸಹ ಕಾರ್ದಯರ್ಶಿ ಎಚ್.ಶಿವರಾಜ್, ಖಜಾಂಚಿ ಎಂ.ಸಾವಕಾಯ, ನಿವೃತ್ತ ಇಂಜಿನಿಯರ್ ಆರ್.ನಟರಾಜು, ರಾಜು ಹಂಪಾಪುರ, ಪುಟ್ಟಸ್ವಾಮಿ, ನಿಸರ್ಗ ಸಿದ್ದರಾಜು, ಮಹದೇವಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ, ಅಹಿಂದ ಜವರಪ್ಪ, ಸಾಹಿತಿ ಕೃಷ್ಣಮೂರ್ತಿ ಚಮರಂ, ಮಲ್ಕುಂಡಿ ಮಹದೇವಸ್ವಾಮಿ, ಪಿ.ಸಂಬ್ಯು, ಹರಕುಮಾರ್, ಬಸವಣ್ಣ, ರಾಘವೇಂದ್ರ ಅಪುರಾ, ಕ್ರಾಂತಿರಾಜ್ ಒಡೆಯರ್, ವಿಜಯಕುವಾರ್, ವಿಶಾಲ್, ವಿವಿಧ ದಲಿತಪರ ಸಂಘಟನೆಗಳ ಮುಖಂಡರು, ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago