ಮೈಸೂರು

ಪ್ರಸಾದ್ ಗಟ್ಟಿಯಾದ ಧ್ವನಿ ಬಿಟ್ಟು ಹೋಗಿದ್ದಾರೆ : ಆರ್.ಮಹಾದೇವಪ್ಪ

ಮೈಸೂರು: ಹಳ್ಳಿಗಾಡಿನಿಂದ ಬಂದಂತಹ ಅದೆಷ್ಟೋ ವಿದ್ಯಾರ್ಥಿಗಳಿಗೆ ಅಶೋಕಪುರಂ ಆಶ್ರಯ ತಾಣವಾಗಿತ್ತು. ಇದೊಂದು ಸಾಂಸ್ಕೃತಿಕ ಕೇಂದ್ರವೂ ಹೌದು. ಇಲ್ಲಿ ಹುಟ್ಟಿ ಬೆಳೆದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಗಟ್ಟಿಯಾದ ಧ್ವನಿಯನ್ನು ಬಿಟ್ಟು ಹೋಗಿದ್ದಾರೆ ಎಂದು ಕರ್ನಾಟಕ ಬುದ್ಧ ಧಮ್ಮ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ ತಿಳಿಸಿದರು.

ವಿಜಯನಗರ ೧ನೇ ಹಂತದ ಡಿ.ಸಂಜೀವ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧ ವಿಹಾರದಲ್ಲಿ ಕರ್ನಾಟಕ ಬುದ್ಧ ಧಮ್ಮ ಸಮಿತಿಯಲ್ಲಿ ಶನಿವಾರ ಸಂಜೆ ನಡೆದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಬದನವಾಳು ಗಲಾಟೆ ನಂತರ ದಲಿತರ ಮೇಲಿನ ದೌರ್ಜನ್ಯ ಒಂದಷ್ಟು ಕಡಿಮೆಯಾದವು. ಈ ಪ್ರಕರಣವು ವಿ.ಶ್ರೀನಿವಾಸ ಪ್ರಸಾದ್ ಅವರಿಗೆ ದೊಡ್ಡ ನಾಯಕತ್ವ ತಂದು ಕೊಟ್ಟಿತು. ಅಲ್ಲಿಂದ ದಲಿತ ಸಮುದಾಯಕ್ಕೆ ಗಟ್ಟಿಯಾದ ಧ್ವನಿಯಾಗಿದ್ದರು. ದಲಿತ ರಾಜಕಾರಣದಲ್ಲಿ ಪ್ರಸ್ತುತ ಇಂತಹ ಗಟ್ಟಿತನ, ಎದೆಗಾರಿಕೆವುಳ್ಳ ಧ್ವನಿ ಇರುವ ನಾಯಕ ಅನಿವಾರ್ಯ ಎಂದರು.

ಸಮಿತಿಯ ಅಧ್ಯಕ್ಷ ಪ್ರೊ.ಡಿ.ನಂಜುಂಡಯ್ಯ ಮಾತನಾಡಿ, ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ತಮ್ಮ ರಾಜಕೀಯ ಜೀವನವನ್ನು ಜನಸಂಘದಿಂದ ಪ್ರಾರಂಭಿಸಿ, ಜನಸಂಘದಿಂದಲೇ ಅವರು ರಾಜಕೀಯ ನಿವೃತ್ತಿಯನ್ನು ಘೋಷಿಸಿದರು. ಆದರೆ, ಅವರ ರಾಜಕೀಯ ಜೀವನದಲ್ಲಿ ದಲಿತ ಸಮುದಾಯಕ್ಕೆ ಹಾಗೂ ಅವರ ಹೆಸರಿನಲ್ಲಿ ಶಾಲೆ-ಕಾಲೇಜು, ಆಸ್ಪತ್ರೆ ಹೀಗೆ ಗುರುತರವಾದಂತಹದ್ದನ್ನು ಬಿಟ್ಟು ಹೋಗದಿರುವುದು ನೋವಿನ ಸಂಗತಿ ಎಂದರು.

ಪತ್ರಕರ್ತ ದೀಪಕ್ ಮಾತನಾಡಿ, ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಗಟ್ಟಿತನ ಎಲ್ಲರಿಗೂ ಮಾದರಿ. ಪ್ರಸಾದ್ ಒಬ್ಬ ದಲಿತ ಪಾಳೇಗಾರರಾಗಿದ್ದರು. ದಲಿತರಿಗೆ ಆರ್ಥಿಕವಾಗಿ, ರಾಜಕೀಯವಾಗಿ ಎಲ್ಲವೂ ಸಿಕ್ಕಿದೆ. ಆದರೆ, ಧ್ವನಿ ಇದ್ದು ಇಲ್ಲದವರಂತಾಗಿದ್ದರು. ಇದನ್ನು ಯಶಸ್ವಿಯಾಗಿ ಶ್ರೀನಿವಾಸ ಪ್ರಸಾದ್ ನಿಭಾಯಿಸಿದ್ದರು. ಆದರೆ, ಅವರ ಇತ್ತೀಚಿನ ರಾಜಕೀಯ ನಡೆ ಸಮುದಾಯಕ್ಕೆ ಬೇಸರ ತರಿಸಿತು ಎಂದರು.

ಮುಖಂಡ ಬಿ.ಎಂ.ಲಿಂಗರಾಜ್ ಮಾತನಾಡಿ, ವಿ.ಶ್ರೀನಿವಾಸ ಪ್ರಸಾದ್‌ರವರು ಎದೆಗಾರಿಕೆ ಇದ್ದ ವ್ಯಕ್ತಿ. ಪ್ರಾವಾಣಿಕವಾಗಿ ರಾಜಕಾರಣ ಮಾಡಿದರು. ಯಾವುದೇ ಭ್ರಷ್ಟಾಚಾರವಿಲ್ಲದೆ ರಾಜಕೀಯ ಜೀವನ ನಡೆಸಿದರು. ಆದರೆ, ಅವರ ನಂತರದ  ರಾಜಕಾರಣಿಯನ್ನು ಹುಟ್ಟು ಹಾಕದಿರುವುದು ಬೇಸರದ ಸಂಗತಿ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಎರಡು ನಿಮಿಷಗಳ ಕಾಲ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮದ ಸಮ್ಮುಖವನ್ನು ಬೌದ್ಧಬಿಕ್ಕು ಸೋದೆ ಭಂತೇಜಿ ವಹಿಸಿದ್ದರು. ಸಮಿತಿಯ ಸಹ ಕಾರ್ದಯರ್ಶಿ ಎಚ್.ಶಿವರಾಜ್, ಖಜಾಂಚಿ ಎಂ.ಸಾವಕಾಯ, ನಿವೃತ್ತ ಇಂಜಿನಿಯರ್ ಆರ್.ನಟರಾಜು, ರಾಜು ಹಂಪಾಪುರ, ಪುಟ್ಟಸ್ವಾಮಿ, ನಿಸರ್ಗ ಸಿದ್ದರಾಜು, ಮಹದೇವಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ, ಅಹಿಂದ ಜವರಪ್ಪ, ಸಾಹಿತಿ ಕೃಷ್ಣಮೂರ್ತಿ ಚಮರಂ, ಮಲ್ಕುಂಡಿ ಮಹದೇವಸ್ವಾಮಿ, ಪಿ.ಸಂಬ್ಯು, ಹರಕುಮಾರ್, ಬಸವಣ್ಣ, ರಾಘವೇಂದ್ರ ಅಪುರಾ, ಕ್ರಾಂತಿರಾಜ್ ಒಡೆಯರ್, ವಿಜಯಕುವಾರ್, ವಿಶಾಲ್, ವಿವಿಧ ದಲಿತಪರ ಸಂಘಟನೆಗಳ ಮುಖಂಡರು, ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

1 hour ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

1 hour ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

1 hour ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

1 hour ago

ಓದುಗರ ಪತ್ರ: ವಿಷಯದ ಗಂಭೀರತೆ ಮರೆತ ಪೊಲೀಸರು

ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…

1 hour ago

ಓದುಗರ ಪತ್ರ: ಇಂಧನದ ಮೇಲಿನ ತೆರಿಗೆ ಇಳಿಸಿ

ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…

2 hours ago