ಮೈಸೂರು

ಪ್ರಸಾದ್‌ ಇಂದಿಗೂ ನಮ್ಮ ಜೊತೆ ಇದ್ದಾರೆ ಎಂದಿಗೂ ಅಮರರಾಗಿರುತ್ತಾರೆ : ಹೆಚ್‌.ವಿಶ್ವನಾಥ್‌

ಮೈಸೂರು : ರಾಜಕಾರಣ, ರಾಜಕೀಯ, ರಾಜಕೀಯದ ನಾಯಕತ್ವ ಬಹಳ ಪ್ರಮುಖವಾದದ್ದು. ಅಂತ ಪ್ರಮುಖವಾದ ಸ್ಥಾನದಲ್ಲಿ ಪ್ರಮುಖವಾದ ಹಲವಾರು ತೀರ್ಮಾನಗಳನ್ನು ತೆಗೆದುಕೊಂಡ ಶ್ರೀನಿವಾಸ ಪ್ರಸಾದ್‌ ಇಂದಿಗೂ ನಮ್ಮ ಜೊತೆ ಇದ್ದಾರೆ ಎಂದಿಗೂ ಅಮರರಾಗಿರುತ್ತಾರೆ ಎಂದು ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ಅಭಿಪ್ರಾಯಪಟ್ಟರು.

ಶ್ರೀನಿವಾಸ ಪ್ರಸಾದ್‌ ಅವರ ನೀವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಾದ್‌ ಮತ್ತು ನಾನು ೫೦ ವರ್ಷದ ಸ್ನೇಹಿತರು. ಓದಿನ ದಿನಗಳಿಂದ ರಾಜಕಾರಣದವರೆಗೂ ಒಟ್ಟಾಗಿ ಬೆಳೆದವರು ನಾವು. ಒಟ್ಟಾಗಿ ದೇಶ, ರಾಜ್ಯ, ಸಾಮಾಜದ ಬಗ್ಗೆ ಯೋಚನೆ ಮಾಡಿದವರು.

ಶ್ರೀನಿವಾಸ ಪ್ರಸಾದ್‌, ಹಲವಾರು ಸಮಾಜ ಸುಧಾರಣೆ ಕಾರ್ಯಕ್ರಮಗಳಿಗೆ ನಾಂದಿ ಹಾಡಿದವರು. ಕೇಂದ್ರದ ವಾಜಪೇಯಿ ಅವರ ಸರ್ಕಾರದಲ್ಲಿ ಶ್ರೀನಿವಾಸ ಪ್ರಸಾದ್‌ ಅವರು ಆಹಾರ ಮತ್ತು ನಾಗರೀಕ ಸರಬರಾಜು ರಾಜ್ಯ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ನಾನು ರಾಜ್ಯದಲ್ಲಿ ಎಸ್‌.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವನಾಗಿದ್ದೆ. ಆ ವೇಳೆ ಮಕ್ಕಳಿಗೆ ಬಿಸಿ ಊಟ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ನಮಗೆ ಅಕ್ಕಿ ಮತ್ತು ಇತರೆ ಆಹಾರ ಪದಾರ್ಥಗಳ ಸರಬರಾಜಿಗೆ ಪ್ರಸಾದ್‌ ಹೆಚ್ಚಿನ ರೀತಿಯಲ್ಲಿ ಸಹಾಯ ಮಾಡಿದ್ದರು. ಅವರ ಸಹಾಯದೊಂದಿಗೆ ಇಂದಿಗೂ ರಾಜ್ಯದಲ್ಲಿ ೮೪ಲಕ್ಷ ಮಕ್ಕಳು ಮಧ್ಯಾಹ್ನದ ಬಿಸಿ ಊಟ ಮಾಡುತ್ತಿದ್ದಾರೆ ಎಂದರು.

ಪ್ರಸಾದ್‌ ಅವರು ಹಲವಾರು ವಿನೂತ ಕಾರ್ಯಕ್ರಮಗಳ ಬಗ್ಗೆ ಯೋಚನೆ ಮಾಡುತ್ತಿದ್ದರು. ವಿಶೇಷವಾಗಿ ನಮ್ಮ ದಕ್ಷಿಣ ಭಾಗದಲ್ಲಿ ದಲಿತ ಸಮುದಾಯದ ಹಿರಿಯ ನಾಯಕರಾಗಿ, ಯಾವುದೇ ರಾಜಿಗೆ ಒಳಗಾಗದೆ ರಾಜಕಾರಣ ಮಾಡಿಕೊಂಡು ಬಂದಿದ್ದ ಧೀರೊದ್ದಾತ್ತ ನಾಯಕ ಎಂದರು.

ಬಹಳ ಜನ ಯುವಕರಿಗೆ ಕಾಂಗ್ರೆಸ್‌ ಪಕ್ಷದಲ್ಲಿ ಬೆಳೆಯಲು ಅವಕಾಶ ಮಾಡಿಕೊಟ್ಟವರು ಶ್ರೀನಿವಾಸ ಪ್ರಸಾದ್‌. ಅವರ ರಾಜಕಾರಣದ ಜೀವನ ಕೂಡ ಬಹಳಾ ಜನೋಪಯೋಗಿ ಹಾಗೂ ವರ್ಣರಂಜಿತವಾಗಿತ್ತು.

ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ನೋವನ್ನು ಭರಿಸುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago