ಮೈಸೂರು

ಪ್ರಸಾದ್‌ ಇಂದಿಗೂ ನಮ್ಮ ಜೊತೆ ಇದ್ದಾರೆ ಎಂದಿಗೂ ಅಮರರಾಗಿರುತ್ತಾರೆ : ಹೆಚ್‌.ವಿಶ್ವನಾಥ್‌

ಮೈಸೂರು : ರಾಜಕಾರಣ, ರಾಜಕೀಯ, ರಾಜಕೀಯದ ನಾಯಕತ್ವ ಬಹಳ ಪ್ರಮುಖವಾದದ್ದು. ಅಂತ ಪ್ರಮುಖವಾದ ಸ್ಥಾನದಲ್ಲಿ ಪ್ರಮುಖವಾದ ಹಲವಾರು ತೀರ್ಮಾನಗಳನ್ನು ತೆಗೆದುಕೊಂಡ ಶ್ರೀನಿವಾಸ ಪ್ರಸಾದ್‌ ಇಂದಿಗೂ ನಮ್ಮ ಜೊತೆ ಇದ್ದಾರೆ ಎಂದಿಗೂ ಅಮರರಾಗಿರುತ್ತಾರೆ ಎಂದು ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ಅಭಿಪ್ರಾಯಪಟ್ಟರು.

ಶ್ರೀನಿವಾಸ ಪ್ರಸಾದ್‌ ಅವರ ನೀವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಾದ್‌ ಮತ್ತು ನಾನು ೫೦ ವರ್ಷದ ಸ್ನೇಹಿತರು. ಓದಿನ ದಿನಗಳಿಂದ ರಾಜಕಾರಣದವರೆಗೂ ಒಟ್ಟಾಗಿ ಬೆಳೆದವರು ನಾವು. ಒಟ್ಟಾಗಿ ದೇಶ, ರಾಜ್ಯ, ಸಾಮಾಜದ ಬಗ್ಗೆ ಯೋಚನೆ ಮಾಡಿದವರು.

ಶ್ರೀನಿವಾಸ ಪ್ರಸಾದ್‌, ಹಲವಾರು ಸಮಾಜ ಸುಧಾರಣೆ ಕಾರ್ಯಕ್ರಮಗಳಿಗೆ ನಾಂದಿ ಹಾಡಿದವರು. ಕೇಂದ್ರದ ವಾಜಪೇಯಿ ಅವರ ಸರ್ಕಾರದಲ್ಲಿ ಶ್ರೀನಿವಾಸ ಪ್ರಸಾದ್‌ ಅವರು ಆಹಾರ ಮತ್ತು ನಾಗರೀಕ ಸರಬರಾಜು ರಾಜ್ಯ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ನಾನು ರಾಜ್ಯದಲ್ಲಿ ಎಸ್‌.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವನಾಗಿದ್ದೆ. ಆ ವೇಳೆ ಮಕ್ಕಳಿಗೆ ಬಿಸಿ ಊಟ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ನಮಗೆ ಅಕ್ಕಿ ಮತ್ತು ಇತರೆ ಆಹಾರ ಪದಾರ್ಥಗಳ ಸರಬರಾಜಿಗೆ ಪ್ರಸಾದ್‌ ಹೆಚ್ಚಿನ ರೀತಿಯಲ್ಲಿ ಸಹಾಯ ಮಾಡಿದ್ದರು. ಅವರ ಸಹಾಯದೊಂದಿಗೆ ಇಂದಿಗೂ ರಾಜ್ಯದಲ್ಲಿ ೮೪ಲಕ್ಷ ಮಕ್ಕಳು ಮಧ್ಯಾಹ್ನದ ಬಿಸಿ ಊಟ ಮಾಡುತ್ತಿದ್ದಾರೆ ಎಂದರು.

ಪ್ರಸಾದ್‌ ಅವರು ಹಲವಾರು ವಿನೂತ ಕಾರ್ಯಕ್ರಮಗಳ ಬಗ್ಗೆ ಯೋಚನೆ ಮಾಡುತ್ತಿದ್ದರು. ವಿಶೇಷವಾಗಿ ನಮ್ಮ ದಕ್ಷಿಣ ಭಾಗದಲ್ಲಿ ದಲಿತ ಸಮುದಾಯದ ಹಿರಿಯ ನಾಯಕರಾಗಿ, ಯಾವುದೇ ರಾಜಿಗೆ ಒಳಗಾಗದೆ ರಾಜಕಾರಣ ಮಾಡಿಕೊಂಡು ಬಂದಿದ್ದ ಧೀರೊದ್ದಾತ್ತ ನಾಯಕ ಎಂದರು.

ಬಹಳ ಜನ ಯುವಕರಿಗೆ ಕಾಂಗ್ರೆಸ್‌ ಪಕ್ಷದಲ್ಲಿ ಬೆಳೆಯಲು ಅವಕಾಶ ಮಾಡಿಕೊಟ್ಟವರು ಶ್ರೀನಿವಾಸ ಪ್ರಸಾದ್‌. ಅವರ ರಾಜಕಾರಣದ ಜೀವನ ಕೂಡ ಬಹಳಾ ಜನೋಪಯೋಗಿ ಹಾಗೂ ವರ್ಣರಂಜಿತವಾಗಿತ್ತು.

ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ನೋವನ್ನು ಭರಿಸುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago