ಮೈಸೂರು : ಶ್ರೀನಿವಾಸ ಪ್ರಸಾದ್ ಅವರ ದೇಹ ನಮ್ಮ ಜೊತೆ ಇಲ್ಲ. ಅವರ ವ್ಯಕ್ತಿವ ಹಾಗೂ ನಡೆದುಕೊಂಡ ರೀತಿ ಮೂಲಕ ಇಂದಿಗೂ ನಮ್ಮ ಜೊತೆ ಇದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ಆವರಣದಲ್ಲಿ ಏರ್ಪಡಿಸಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀನಿವಾಸ ಪ್ರಸಾದ್ ಯಾವುದೇ ನಿಲುವು ತಾಳುವಾಗ ವಸ್ತು ನಿಷ್ಠೆಯ ಹಾದಿಯಲ್ಲಿ ಹೋಗುತ್ತಿದ್ದರೇ ಹೊರತು ಜಾತಿ ಪರವಾಗಿ ಎಂದಿಗೂ ಹೋಗುತ್ತಿರಲಿಲ್ಲ ಎಂದರು.
ಪ್ರಸಾದ್ ಅವರು ತಮ್ಮ ರಾಜಕೀಯ ಜೀವನದಲ್ಲಿ ಭೂ ವ್ಯವಹಾರವಾಗಲಿ, ಡೊನೇಷನ್ ಪಡೆದ ಅಥವಾ ಚುನಾವಣೆಯಲ್ಲಿ ದುಡ್ಡಿನ ಸಹಾಯ ಪಡೆದ ಉದಾಹರಣೆಯೇ ಇಲ್ಲ ಎಂದರು.
ಶ್ರೀನಿವಾಸ ಪ್ರಸಾದ್ ಅವರ ಅಳಿಯ ಹರ್ಷ ಹಾಗೂ ನನ್ನ ನಡುವೆ ಸಣ್ಣ ಜಟಾಪಟಿಯಾಗಿದ್ದ ಸಂದರ್ಭದಲ್ಲಿ ಪ್ರಸಾದ್ ಅವರು ಯಾರ ಪರ ನಿಲ್ಲುತ್ತಾರೆ ಎಂಬುದೇ ತಿಳಿಯಲಿಲ್ಲ.
ಕೊನೆಗೂ ಇವರಿಬ್ಬರು ಸಹೋದರರಿದ್ದಂತೆ ಅವರೆ ಜಗಳವನ್ನು ಸರಿ ಮಾಡಿಕೊಳ್ಳುತ್ತಾರೆ ಎಂದು ತಟಸ್ಥರಾಗಿದ್ದರು. ಯಾವುದೇ ವಿಚಾರವಾಗಲಿ ನಿಲುವು ತಾಳದೇ ಬಿಟ್ಟುಬಿಡುತ್ತಿದ್ದರು.ಈ ಮೂಲಕ ಎಲ್ಲರ ಪ್ರೀತಿ ವಿಶ್ವಾಸವನ್ನು ಪಡೆದ ವ್ಯಕ್ತಿ ಶ್ರೀನಿವಾಸ ಪ್ರಸಾದ್ ಎಂದು ಹೇಳಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…