ಮೈಸೂರು

ಪ್ರಸಾದ್‌ ವ್ಯಕ್ತಿತ್ವ ಹಾಗೂ ನಡವಳಿಕೆಯ ಮೂಲಕ ನಮ್ಮೊಂದಿಗಿದ್ದಾರೆ :ಪ್ರತಾಪ್‌ ಸಿಂಹ

ಮೈಸೂರು : ಶ್ರೀನಿವಾಸ ಪ್ರಸಾದ್‌ ಅವರ ದೇಹ ನಮ್ಮ ಜೊತೆ ಇಲ್ಲ. ಅವರ ವ್ಯಕ್ತಿವ ಹಾಗೂ ನಡೆದುಕೊಂಡ ರೀತಿ ಮೂಲಕ ಇಂದಿಗೂ ನಮ್ಮ ಜೊತೆ ಇದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಅಭಿಪ್ರಾಯಪಟ್ಟರು.

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್‌ ಆವರಣದಲ್ಲಿ ಏರ್ಪಡಿಸಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀನಿವಾಸ ಪ್ರಸಾದ್‌ ಯಾವುದೇ ನಿಲುವು ತಾಳುವಾಗ ವಸ್ತು ನಿಷ್ಠೆಯ ಹಾದಿಯಲ್ಲಿ ಹೋಗುತ್ತಿದ್ದರೇ ಹೊರತು ಜಾತಿ ಪರವಾಗಿ ಎಂದಿಗೂ ಹೋಗುತ್ತಿರಲಿಲ್ಲ ಎಂದರು.

ಪ್ರಸಾದ್‌ ಅವರು ತಮ್ಮ ರಾಜಕೀಯ ಜೀವನದಲ್ಲಿ ಭೂ ವ್ಯವಹಾರವಾಗಲಿ, ಡೊನೇಷನ್‌ ಪಡೆದ ಅಥವಾ ಚುನಾವಣೆಯಲ್ಲಿ ದುಡ್ಡಿನ ಸಹಾಯ ಪಡೆದ ಉದಾಹರಣೆಯೇ ಇಲ್ಲ ಎಂದರು.

ಶ್ರೀನಿವಾಸ ಪ್ರಸಾದ್‌ ಅವರ ಅಳಿಯ ಹರ್ಷ ಹಾಗೂ ನನ್ನ ನಡುವೆ ಸಣ್ಣ ಜಟಾಪಟಿಯಾಗಿದ್ದ ಸಂದರ್ಭದಲ್ಲಿ ಪ್ರಸಾದ್‌ ಅವರು ಯಾರ ಪರ ನಿಲ್ಲುತ್ತಾರೆ ಎಂಬುದೇ ತಿಳಿಯಲಿಲ್ಲ.

ಕೊನೆಗೂ ಇವರಿಬ್ಬರು ಸಹೋದರರಿದ್ದಂತೆ ಅವರೆ ಜಗಳವನ್ನು ಸರಿ ಮಾಡಿಕೊಳ್ಳುತ್ತಾರೆ ಎಂದು ತಟಸ್ಥರಾಗಿದ್ದರು. ಯಾವುದೇ ವಿಚಾರವಾಗಲಿ ನಿಲುವು ತಾಳದೇ ಬಿಟ್ಟುಬಿಡುತ್ತಿದ್ದರು.ಈ ಮೂಲಕ ಎಲ್ಲರ ಪ್ರೀತಿ ವಿಶ್ವಾಸವನ್ನು ಪಡೆದ ವ್ಯಕ್ತಿ ಶ್ರೀನಿವಾಸ ಪ್ರಸಾದ್‌ ಎಂದು ಹೇಳಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

5 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

6 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

7 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

11 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

12 hours ago